ಲೋಕಾಯುಕ್ತ ಇನ್ಸ್ಪೆಕ್ಟರ್ ಮೋಹನ್ ಹೆಡ್ಣನವರ್ ಮಾತನಾಡಿ, ‘ಸಾರ್ವಜನಿಕರು ತಮ್ಮ ಸರ್ಕಾರಿ ಕೆಲಸ ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಹಣಕ್ಕೆ ಬೇಡಿಕೆಯಿಟ್ಟರೆ, ನಮಗೆ ದೂರು ನೀಡಿ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಸಹ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮತ್ತು ಹಣಕ್ಕೆ ಒತ್ತಾಯಿಸದೆ, ಮಾಡಿಕೊಡಬೇಕು’ ಎಂದು ಸೂಚನೆ ನೀಡಿದರು.