ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಮುರಳಿ, ಪಕ್ಕದ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರ ಪ್ರೀತಿಗೆ ಪೋಷಕರವಿರೋಧವಿದ್ದ ಕಾರಣದಿಂದ ಮನನೊಂದು ಮುರಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದಿಬ್ಬೂರಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.