<p><strong>ಚಿಕ್ಕಬಳ್ಳಾಪುರ:</strong> ಕರ್ನಾಟಕ ಮಾದರ ಮಹಾಸಭಾ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಮಹಾಸಭಾ ಜಿಲ್ಲಾ ಅಧ್ಯಕ್ಷರಾಗಿ ಪಟ್ರೇನಹಳ್ಳಿ ಕೃಷ್ಣಪ್ಪ ನೇಮಕವಾಗಿದ್ದಾರೆ. </p>.<p>ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಹಾಸಭಾ ರಾಜ್ಯ ನಾಯಕರು ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದರು. </p>.<p>ಈ ವೇಳೆ ಮಾತನಾಡಿದ ಪಟ್ರೇನಹಳ್ಳಿ ಕೃಷ್ಣಪ್ಪ, ಜಿಲ್ಲೆಯಲ್ಲಿ ಮಾದಿಗ ಸಮಾಜವು ದೊಡ್ಡ ಸಂಖ್ಯೆಯಲ್ಲಿ ಇದೆ. ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಎರಡು ಸಾವಿರ ಮಂದಿಯನ್ನು ಮಹಾಸಭಾ ಸದಸ್ಯರನ್ನಾಗಿ ಮಾಡಲಾಗುವುದು ಎಂದು ಹೇಳಿದರು.</p>.<p>ಹಿರಿಯರ ಸಹಕಾರದಲ್ಲಿ ಮಹಾಸಭಾಕ್ಕೆ ಸದಸ್ಯತ್ವ ಮಾಡಿಸಲಾಗುವುದು. ಸಮುದಾಯ ಒಗ್ಗೂಡಿಸಲಾಗುವುದು. ಸಹೋದರ ಸಮುದಾಯಗಳ ಜೊತೆ ಸಾಮಾಜಿಕ ಸಾಮರಸ್ಯ ಸಾಧಿಸಲಾಗುವುದು. ನಮ್ಮ ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಯುವಕರ ಪಾತ್ರ ಹಿರಿದು. ಈ ದಿಕ್ಕಿನಲ್ಲಿ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು ಎಂದು ಹೇಳಿದರು.</p>.<p>ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿಯೇ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡುವ ಗುರಿ ಇದೆ. ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುನ್ನಲೆಗೆ ಬರಬೇಕು. ಈ ದಿಕ್ಕಿನಲ್ಲಿ ಮಹಾಸಭಾ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.</p>.<p>ಮಹಾಸಭಾ ರಾಜ್ಯ ಕಾರ್ಯಕಾರಿ ಸದಸ್ಯ ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ವಿವಿಧ ಜಾತಿ, ಸಮುದಾಯಗಳು ಸಂಘ ರೂಪಿಸಿಕೊಂಡು ಅಭಿವೃದ್ಧಿ ಹೊಂದುತ್ತಿವೆ. ಪರಿಶಿಷ್ಟ ಜಾತಿಯಲ್ಲಿಯೇ ಮಾದಿಗ ಸಮುದಾಯ ಬಹುಸಂಖ್ಯೆಯಲ್ಲಿದೆ ಎಂದು ಹೇಳಿದರು.</p>.<p>ಸಮುದಾಯದ 18 ವರ್ಷ ಮೇಲ್ಪಟ್ಟವರು ಸದಸ್ಯರಾಗಬಹುದು. ಸದಸ್ಯತ್ವದ ವಿಚಾರದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಮಹಾಸಭಾ ಮೊದಲ ಸ್ಥಾನದಲ್ಲಿ ಇದೆ. ಮಾದಿಗ ಸಮಾಜ ಮುಖ್ಯವಾಹಿನಿಗೆ ಬರಬೇಕು ಎನ್ನುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದು ಹೇಳಿದರು.</p>.<p>ಮಾಜಿ ಶಾಸಕಿ ಅನಸೂಯಮ್ಮ, ಮುಖಂಡರಾದ ತಿರುಮಲಪ್ಪ, ಕಮಲಮ್ಮ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><strong>ಪದಾಧಿಕಾರಿಗಳು</strong> </p><p>ಅಧ್ಯಕ್ಷರಾಗಿ ಪಟ್ರೇನಹಳ್ಳಿ ಕೃಷ್ಣಪ್ಪ ಉಪಾಧ್ಯಕ್ಷರಾಗಿ ಮಾದನಹಳ್ಳಿ ಮುನಿಯಪ್ಪ ಕಾರ್ಯದರ್ಶಿಯಾಗಿ ಭಕ್ತರಹಳ್ಳಿ ಬಿ.ಇ.ವಿಶ್ವನಾಥ್ ಖಜಾಂಚಿಯಾಗಿ ಹೊಸಹುಡ್ಯ ನಾಗಪ್ಪ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಮಲಮ್ಮ ಸಿ.ಎನ್.ಜಯರಾಮ್ ಟಿ.ನಾರಾಯಣಸ್ವಾಮಿ ಪೂಜಪ್ಪ ಸಿ.ಎನ್.ಮುರಳಿಮೋಹನ್ ವಿಶೇಷ ಆಹ್ವಾನಿತರಾಗಿ ಅನಸೂಯಮ್ಮ ನಟರಾಜ್ ಕೃಷ್ಣಮೂರ್ತಿ ವೆಂಕಟೇಶಪ್ಪ ಬಿ.ವಿ ವೆಂಕಟರವಣಪ್ಪ ಸುಬ್ಬರಾಯಪ್ಪ ನೇಮಕವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕರ್ನಾಟಕ ಮಾದರ ಮಹಾಸಭಾ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಮಹಾಸಭಾ ಜಿಲ್ಲಾ ಅಧ್ಯಕ್ಷರಾಗಿ ಪಟ್ರೇನಹಳ್ಳಿ ಕೃಷ್ಣಪ್ಪ ನೇಮಕವಾಗಿದ್ದಾರೆ. </p>.<p>ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಹಾಸಭಾ ರಾಜ್ಯ ನಾಯಕರು ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದರು. </p>.<p>ಈ ವೇಳೆ ಮಾತನಾಡಿದ ಪಟ್ರೇನಹಳ್ಳಿ ಕೃಷ್ಣಪ್ಪ, ಜಿಲ್ಲೆಯಲ್ಲಿ ಮಾದಿಗ ಸಮಾಜವು ದೊಡ್ಡ ಸಂಖ್ಯೆಯಲ್ಲಿ ಇದೆ. ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಎರಡು ಸಾವಿರ ಮಂದಿಯನ್ನು ಮಹಾಸಭಾ ಸದಸ್ಯರನ್ನಾಗಿ ಮಾಡಲಾಗುವುದು ಎಂದು ಹೇಳಿದರು.</p>.<p>ಹಿರಿಯರ ಸಹಕಾರದಲ್ಲಿ ಮಹಾಸಭಾಕ್ಕೆ ಸದಸ್ಯತ್ವ ಮಾಡಿಸಲಾಗುವುದು. ಸಮುದಾಯ ಒಗ್ಗೂಡಿಸಲಾಗುವುದು. ಸಹೋದರ ಸಮುದಾಯಗಳ ಜೊತೆ ಸಾಮಾಜಿಕ ಸಾಮರಸ್ಯ ಸಾಧಿಸಲಾಗುವುದು. ನಮ್ಮ ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಯುವಕರ ಪಾತ್ರ ಹಿರಿದು. ಈ ದಿಕ್ಕಿನಲ್ಲಿ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು ಎಂದು ಹೇಳಿದರು.</p>.<p>ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿಯೇ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡುವ ಗುರಿ ಇದೆ. ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುನ್ನಲೆಗೆ ಬರಬೇಕು. ಈ ದಿಕ್ಕಿನಲ್ಲಿ ಮಹಾಸಭಾ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.</p>.<p>ಮಹಾಸಭಾ ರಾಜ್ಯ ಕಾರ್ಯಕಾರಿ ಸದಸ್ಯ ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ವಿವಿಧ ಜಾತಿ, ಸಮುದಾಯಗಳು ಸಂಘ ರೂಪಿಸಿಕೊಂಡು ಅಭಿವೃದ್ಧಿ ಹೊಂದುತ್ತಿವೆ. ಪರಿಶಿಷ್ಟ ಜಾತಿಯಲ್ಲಿಯೇ ಮಾದಿಗ ಸಮುದಾಯ ಬಹುಸಂಖ್ಯೆಯಲ್ಲಿದೆ ಎಂದು ಹೇಳಿದರು.</p>.<p>ಸಮುದಾಯದ 18 ವರ್ಷ ಮೇಲ್ಪಟ್ಟವರು ಸದಸ್ಯರಾಗಬಹುದು. ಸದಸ್ಯತ್ವದ ವಿಚಾರದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಮಹಾಸಭಾ ಮೊದಲ ಸ್ಥಾನದಲ್ಲಿ ಇದೆ. ಮಾದಿಗ ಸಮಾಜ ಮುಖ್ಯವಾಹಿನಿಗೆ ಬರಬೇಕು ಎನ್ನುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದು ಹೇಳಿದರು.</p>.<p>ಮಾಜಿ ಶಾಸಕಿ ಅನಸೂಯಮ್ಮ, ಮುಖಂಡರಾದ ತಿರುಮಲಪ್ಪ, ಕಮಲಮ್ಮ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><strong>ಪದಾಧಿಕಾರಿಗಳು</strong> </p><p>ಅಧ್ಯಕ್ಷರಾಗಿ ಪಟ್ರೇನಹಳ್ಳಿ ಕೃಷ್ಣಪ್ಪ ಉಪಾಧ್ಯಕ್ಷರಾಗಿ ಮಾದನಹಳ್ಳಿ ಮುನಿಯಪ್ಪ ಕಾರ್ಯದರ್ಶಿಯಾಗಿ ಭಕ್ತರಹಳ್ಳಿ ಬಿ.ಇ.ವಿಶ್ವನಾಥ್ ಖಜಾಂಚಿಯಾಗಿ ಹೊಸಹುಡ್ಯ ನಾಗಪ್ಪ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಮಲಮ್ಮ ಸಿ.ಎನ್.ಜಯರಾಮ್ ಟಿ.ನಾರಾಯಣಸ್ವಾಮಿ ಪೂಜಪ್ಪ ಸಿ.ಎನ್.ಮುರಳಿಮೋಹನ್ ವಿಶೇಷ ಆಹ್ವಾನಿತರಾಗಿ ಅನಸೂಯಮ್ಮ ನಟರಾಜ್ ಕೃಷ್ಣಮೂರ್ತಿ ವೆಂಕಟೇಶಪ್ಪ ಬಿ.ವಿ ವೆಂಕಟರವಣಪ್ಪ ಸುಬ್ಬರಾಯಪ್ಪ ನೇಮಕವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>