<p><strong>ಚಿಕ್ಕಬಳ್ಳಾಪುರ</strong>: ‘ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ 25 ವರ್ಷ ಪೂರೈಸಿದ ಪ್ರಯುಕ್ತ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಈದುಮುಡಿ ಗ್ರಾಮದಲ್ಲಿ ಜುಲೈ 7 ರಂದು 25ನೇ ವಾರ್ಷಿಕೋತ್ಸವ ಅಂಗವಾಗಿ ಮಾದಿಗರ ಆತ್ಮಗೌರವ ಜಾತ್ರೆ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಶೋಷಿತ ಸಮುದಾಯವಾದ ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಆರಂಭಗೊಂಡ ಸಮಿತಿಯು ನಿರಂತರ ಹೋರಾಟಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯುತ್ತ ಬಂದಿದೆ’ ಎಂದು ಹೇಳಿದರು.</p>.<p>‘ಬಹು ದೊಡ್ಡ ಜನಸಂಖ್ಯೆ ಹೊಂದಿದರೂ ಸಮುದಾಯ ಇಂದಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿನ್ನಡೆ ಅನುಭವಿಸಿರುವುದು ದುರಂತ. ಇದಕ್ಕಾಗಿ ಸಮಿತಿಯಿಂದ ಅನೇಕ ಹೋರಾಟ, ಚಳವಳಿಗಳನ್ನು ರೂಪಿಸಿದ್ದು, ಸಮುದಾಯದ ನಾನಾ ಬೇಡಿಕೆಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮಾದಿಗ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸಬೇಕು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಬೇಕು. ಈ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸಿದರೆ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು’ ಎಂದು ಹೇಳಿದರು.</p>.<p>‘ಜುಲೈ 7 ರಂದು ನಡೆಯಲಿರುವ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ರಾಷ್ಟ್ರೀಯ ನಾಯಕರಾದ ಮಂದಕೃಷ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ಸಮುದಾಯದ ಬಂಧುಗಳು, ಹೋರಾಟಗಾರರು, ಚಿಂತಕರು, ಮುಖಂಡರು ಭಾಗವಹಿಸಬೇಕು. ಜಿಲ್ಲೆಯಿಂದ ಸುಮಾರು 1,000 ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p>.<p>ಮಾದಿಗ ಮೀಸಲಾತಿ ಹೋರಾಟ ಸಮಿತಿ ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಸಿ.ವಿ.ವೀಣಾ, ಉಪಾಧ್ಯಕ್ಷೆ ಧನಲಕ್ಷ್ಮೀ, ಮುಖಂಡರಾದ ರಾಮಕೃಷ್ಣಪ್ಪ, ಶಿವಪ್ಪ, ನರಸಿಂಹಪ್ಪ, ಕೃಷ್ಣಪ್ಪ, ಮಧುಕುಮಾರ್, ಮುನಿಯಪ್ಪ, ರಮಣ್ ಅಖಿಲೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ 25 ವರ್ಷ ಪೂರೈಸಿದ ಪ್ರಯುಕ್ತ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಈದುಮುಡಿ ಗ್ರಾಮದಲ್ಲಿ ಜುಲೈ 7 ರಂದು 25ನೇ ವಾರ್ಷಿಕೋತ್ಸವ ಅಂಗವಾಗಿ ಮಾದಿಗರ ಆತ್ಮಗೌರವ ಜಾತ್ರೆ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಶೋಷಿತ ಸಮುದಾಯವಾದ ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಆರಂಭಗೊಂಡ ಸಮಿತಿಯು ನಿರಂತರ ಹೋರಾಟಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯುತ್ತ ಬಂದಿದೆ’ ಎಂದು ಹೇಳಿದರು.</p>.<p>‘ಬಹು ದೊಡ್ಡ ಜನಸಂಖ್ಯೆ ಹೊಂದಿದರೂ ಸಮುದಾಯ ಇಂದಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿನ್ನಡೆ ಅನುಭವಿಸಿರುವುದು ದುರಂತ. ಇದಕ್ಕಾಗಿ ಸಮಿತಿಯಿಂದ ಅನೇಕ ಹೋರಾಟ, ಚಳವಳಿಗಳನ್ನು ರೂಪಿಸಿದ್ದು, ಸಮುದಾಯದ ನಾನಾ ಬೇಡಿಕೆಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮಾದಿಗ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸಬೇಕು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಬೇಕು. ಈ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸಿದರೆ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು’ ಎಂದು ಹೇಳಿದರು.</p>.<p>‘ಜುಲೈ 7 ರಂದು ನಡೆಯಲಿರುವ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ರಾಷ್ಟ್ರೀಯ ನಾಯಕರಾದ ಮಂದಕೃಷ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ಸಮುದಾಯದ ಬಂಧುಗಳು, ಹೋರಾಟಗಾರರು, ಚಿಂತಕರು, ಮುಖಂಡರು ಭಾಗವಹಿಸಬೇಕು. ಜಿಲ್ಲೆಯಿಂದ ಸುಮಾರು 1,000 ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p>.<p>ಮಾದಿಗ ಮೀಸಲಾತಿ ಹೋರಾಟ ಸಮಿತಿ ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಸಿ.ವಿ.ವೀಣಾ, ಉಪಾಧ್ಯಕ್ಷೆ ಧನಲಕ್ಷ್ಮೀ, ಮುಖಂಡರಾದ ರಾಮಕೃಷ್ಣಪ್ಪ, ಶಿವಪ್ಪ, ನರಸಿಂಹಪ್ಪ, ಕೃಷ್ಣಪ್ಪ, ಮಧುಕುಮಾರ್, ಮುನಿಯಪ್ಪ, ರಮಣ್ ಅಖಿಲೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>