<p><strong>ರಾಮನಗರ</strong>: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಕಾರ್ಮಿಕ ಇಲಾಖೆಗೆ ಲೋಕಾಯುಕ್ತ ಎಸ್ಪಿ ಸ್ನೇಹ ಪಿ.ವಿ ಅವರು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಕಚೇರಿ ಸಂಬಂಧಿಸಿದ ಕಡತ, ಹಾಜರಾತಿ ಪುಸ್ತಕ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. </p>.<p>ಹೊರಗುತ್ತಿಗೆ ನೌಕರರು, ಕಾರ್ಮಿಕರ ಮಾಹಿತಿ, ಆರ್ಟಿಐಗೆ ಸಂಬಂಧಿಸಿದ ಮಾಹಿತಿ, ಗ್ಯಾಸ್ ಏಜೆನ್ಸಿ ವಿರುದ್ಧ ದಾಖಲಿಸಿದ ಪ್ರಕರಣಗಳು, ಕಟ್ಟಡ ಕಾರ್ಮಿಕರ ವಿವಾಹ ನೋಂದಣಿಗೆ ಸಹಾಯಧನದ ಬಗ್ಗೆ ಪರಿಶೀಲಿಸಿದರು. </p>.<p>ಬಳಿಕ ಬಾಲ ಕಾರ್ಮಿಕರ ಸಹಾಯವಾಣಿ 1098, ಕಾರ್ಮಿಕರ ಸಹಾಯವಾಣಿ 155214 ಸಂಖ್ಯೆಗೆ ಲೋಕಾಯುಕ್ತ ಎಸ್ಪಿ ಅವರೇ ಕರೆ ಮಾಡಿದರು. ಈ ವೇಳೆ ಸಂಪರ್ಕವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. </p>.<p>ಅಂಬೇಡ್ಕರ್ ಸಂಚಾರಿ ಕಾರ್ಮಿಕ ಸೇವಾ ಕೇಂದ್ರದ ವಾಹನ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿ ಶ್ರೀಕಾಂತ್ ನಾಯ್ಕ್, ಕಾರು ಚಾಲಕ ಕಿರಣಕುಮಾರ್ ಸಮರ್ಪಕ ಮಾಹಿತಿ ಒದಗಿಸಲಿಲ್ಲ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. </p>.<p>ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಕಾರ್ಮಿಕರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಕಾರ್ಮಿಕ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಸೂಚಿಸಿದರು. </p>.<p>ಲೋಕಾಯುಕ್ತ ಎಸ್.ಪಿ ಸ್ನೇಹ ಅವರ ಜೊತೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಬಿ.ಎನ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್.ಆರ್., ಕಾರ್ಮಿಕ ನಿರೀಕ್ಷಿಕ ಪ್ರದೀಪ್ ಎಂ ಹಾಗೂ ಸಿಬ್ಬಂದಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಕಾರ್ಮಿಕ ಇಲಾಖೆಗೆ ಲೋಕಾಯುಕ್ತ ಎಸ್ಪಿ ಸ್ನೇಹ ಪಿ.ವಿ ಅವರು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಕಚೇರಿ ಸಂಬಂಧಿಸಿದ ಕಡತ, ಹಾಜರಾತಿ ಪುಸ್ತಕ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. </p>.<p>ಹೊರಗುತ್ತಿಗೆ ನೌಕರರು, ಕಾರ್ಮಿಕರ ಮಾಹಿತಿ, ಆರ್ಟಿಐಗೆ ಸಂಬಂಧಿಸಿದ ಮಾಹಿತಿ, ಗ್ಯಾಸ್ ಏಜೆನ್ಸಿ ವಿರುದ್ಧ ದಾಖಲಿಸಿದ ಪ್ರಕರಣಗಳು, ಕಟ್ಟಡ ಕಾರ್ಮಿಕರ ವಿವಾಹ ನೋಂದಣಿಗೆ ಸಹಾಯಧನದ ಬಗ್ಗೆ ಪರಿಶೀಲಿಸಿದರು. </p>.<p>ಬಳಿಕ ಬಾಲ ಕಾರ್ಮಿಕರ ಸಹಾಯವಾಣಿ 1098, ಕಾರ್ಮಿಕರ ಸಹಾಯವಾಣಿ 155214 ಸಂಖ್ಯೆಗೆ ಲೋಕಾಯುಕ್ತ ಎಸ್ಪಿ ಅವರೇ ಕರೆ ಮಾಡಿದರು. ಈ ವೇಳೆ ಸಂಪರ್ಕವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. </p>.<p>ಅಂಬೇಡ್ಕರ್ ಸಂಚಾರಿ ಕಾರ್ಮಿಕ ಸೇವಾ ಕೇಂದ್ರದ ವಾಹನ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿ ಶ್ರೀಕಾಂತ್ ನಾಯ್ಕ್, ಕಾರು ಚಾಲಕ ಕಿರಣಕುಮಾರ್ ಸಮರ್ಪಕ ಮಾಹಿತಿ ಒದಗಿಸಲಿಲ್ಲ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. </p>.<p>ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಕಾರ್ಮಿಕರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಕಾರ್ಮಿಕ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಸೂಚಿಸಿದರು. </p>.<p>ಲೋಕಾಯುಕ್ತ ಎಸ್.ಪಿ ಸ್ನೇಹ ಅವರ ಜೊತೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಬಿ.ಎನ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್.ಆರ್., ಕಾರ್ಮಿಕ ನಿರೀಕ್ಷಿಕ ಪ್ರದೀಪ್ ಎಂ ಹಾಗೂ ಸಿಬ್ಬಂದಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>