ಬಿಜಿಎಸ್ ಶಿಕ್ಷಣ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಎನ್.ಶಿವರಾಂ ರೆಡ್ಡಿ ಮಾತನಾಡಿ, ‘ಪೋಷಕರ ಒಡನಾಟದಲ್ಲಿ ಬೆಳೆಯುವ ಮಕ್ಕಳು ಅವರ ಆಲೋಚನೆ, ಚಿಂತನೆಗಳನ್ನು ಅನುಸರಿಸುತ್ತಾರೆ. ಉತ್ತಮ ಸಂಸ್ಕಾರವುಳ್ಳ ಪರಿಸರದಲ್ಲಿ ಬೆಳೆಯುವ ಮಕ್ಕಳಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಮಗುವಿಗೆ ಶಿಕ್ಷಕರು ಶಾಲೆಯಲ್ಲಿಯೇ ಎಲ್ಲವನ್ನು ಕಲಿಸಲು ಸಾಧ್ಯವಿಲ್ಲ. ಆದ್ದರಿಂದ ಪೋಷಕರು ಕೂಡ ತಮ್ಮ ಜವಾಬ್ದಾರಿ ಅರಿತು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದರು.