<p><strong>ಬಾಗೇಪಲ್ಲಿ:</strong> ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪುಸ್ತಕ ಹಾಗೂ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅನಿವಾರ್ಯ ಎಂದು ಸಬ್ಇನ್ಸ್ಪೆಕ್ಟರ್ ಜಿ.ಕೆ.ಸುನೀಲ್ ಕುಮಾರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದೆ. ಉದ್ಯೋಗ ಪಡೆಯಲು ತೀವ್ರ ಪೈಪೋಟಿ ಇದೆ. ಹಾಗಾಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು. ನಿರಂತರ ಕಲಿಕೆಯಿಂದ ಯಶಸ್ಸು ಸಾಧ್ಯ. ಮೊಬೈಲ್ಗಳನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಿ. ಅಪರಾಧ ಚಟುವಟಿಕೆಗಳಿಂದ ದೂರವಿರಿ ಎಂದು ಸಲಹೆ<br />ನೀಡಿದರು.</p>.<p>ಪ್ರಾಂಶುಪಾಲ ಪ್ರೊ.ವೈ.ನಾರಾಯಣ ಮಾತನಾಡಿ, ‘ಸರ್ಕಾರಿ ಪದವಿ ಕಾಲೇಜಿನಲ್ಲಿ ಪಿಎಚ್ಡಿ ಪದವಿ ಪಡೆದ ಪ್ರಾಧ್ಯಾಪಕರು ಹೆಚ್ಚಿದ್ದಾರೆ. ಕಾಲೇಜಿನ ಎದುರು ₹1 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲಾಗಿದೆ. ಕಲಿಕೆಗೆ ಪೂರಕ ಸೌಕರ್ಯಗಳಿವೆ. ಪ್ರಾಧ್ಯಾಪಕರ ಮಾರ್ಗದರ್ಶನ ಪಡೆದು, ಉತ್ತಮ ಅಂಕ ಗಳಿಸಿ’ ಎಂದು ಹೇಳಿದರು.</p>.<p>ಗ್ರಂಥಪಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ‘ತಾಲ್ಲೂಕಿನಲ್ಲಿ ನದಿ, ನಾಲೆಗಳು, ಕೈಗಾರಿಕಾ ಪ್ರದೇಶಗಳು ಇಲ್ಲ. ಬಹುತೇಕರು ಕೃಷಿ ನಂಬಿ ಬದುಕುತ್ತಿದ್ದಾರೆ. ರೈತರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಅಧಿಕಾರಿಗಳಾಗಿದ್ದಾರೆ. ಭವಿಷ್ಯಕ್ಕೆ ಶಿಕ್ಷಣವೇ ಶಾಶ್ವತ. ಕಾಲೇಜು ಜೀವನವನ್ನು ಭವಿಷ್ಯಕ್ಕೆ ಭದ್ರ ಬುನಾದಿಯಾಗಿ ಬಳಿಸಿಕೊಳ್ಳಬೇಕು ಎಂದರು.</p>.<p>ಪ್ರಾಧ್ಯಾಪಕರಾದ ಡಾ.ಕೆ.ಎಂ.ನಯಾಜ್ ಅಹಮದ್, ಡಾ.ಬಿ.ಎನ್.ಪ್ರಭಾಕರ್, ಡಾ.ಮೋಹನ್, ಉಪನ್ಯಾಸಕರಾದ ಎಲ್.ಶ್ರೀನಿವಾಸ್, ಅನಿಲ್, ಮನೋರಂಜನ್, ನಂದನಾ, ಅಧೀಕ್ಷಕಿ ಅನಿತಾ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಕಾರ್ಯದರ್ಶಿ ಡಿ.ಎನ್.ಕೃಷ್ಣಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪುಸ್ತಕ ಹಾಗೂ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅನಿವಾರ್ಯ ಎಂದು ಸಬ್ಇನ್ಸ್ಪೆಕ್ಟರ್ ಜಿ.ಕೆ.ಸುನೀಲ್ ಕುಮಾರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದೆ. ಉದ್ಯೋಗ ಪಡೆಯಲು ತೀವ್ರ ಪೈಪೋಟಿ ಇದೆ. ಹಾಗಾಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು. ನಿರಂತರ ಕಲಿಕೆಯಿಂದ ಯಶಸ್ಸು ಸಾಧ್ಯ. ಮೊಬೈಲ್ಗಳನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಿ. ಅಪರಾಧ ಚಟುವಟಿಕೆಗಳಿಂದ ದೂರವಿರಿ ಎಂದು ಸಲಹೆ<br />ನೀಡಿದರು.</p>.<p>ಪ್ರಾಂಶುಪಾಲ ಪ್ರೊ.ವೈ.ನಾರಾಯಣ ಮಾತನಾಡಿ, ‘ಸರ್ಕಾರಿ ಪದವಿ ಕಾಲೇಜಿನಲ್ಲಿ ಪಿಎಚ್ಡಿ ಪದವಿ ಪಡೆದ ಪ್ರಾಧ್ಯಾಪಕರು ಹೆಚ್ಚಿದ್ದಾರೆ. ಕಾಲೇಜಿನ ಎದುರು ₹1 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲಾಗಿದೆ. ಕಲಿಕೆಗೆ ಪೂರಕ ಸೌಕರ್ಯಗಳಿವೆ. ಪ್ರಾಧ್ಯಾಪಕರ ಮಾರ್ಗದರ್ಶನ ಪಡೆದು, ಉತ್ತಮ ಅಂಕ ಗಳಿಸಿ’ ಎಂದು ಹೇಳಿದರು.</p>.<p>ಗ್ರಂಥಪಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ‘ತಾಲ್ಲೂಕಿನಲ್ಲಿ ನದಿ, ನಾಲೆಗಳು, ಕೈಗಾರಿಕಾ ಪ್ರದೇಶಗಳು ಇಲ್ಲ. ಬಹುತೇಕರು ಕೃಷಿ ನಂಬಿ ಬದುಕುತ್ತಿದ್ದಾರೆ. ರೈತರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಅಧಿಕಾರಿಗಳಾಗಿದ್ದಾರೆ. ಭವಿಷ್ಯಕ್ಕೆ ಶಿಕ್ಷಣವೇ ಶಾಶ್ವತ. ಕಾಲೇಜು ಜೀವನವನ್ನು ಭವಿಷ್ಯಕ್ಕೆ ಭದ್ರ ಬುನಾದಿಯಾಗಿ ಬಳಿಸಿಕೊಳ್ಳಬೇಕು ಎಂದರು.</p>.<p>ಪ್ರಾಧ್ಯಾಪಕರಾದ ಡಾ.ಕೆ.ಎಂ.ನಯಾಜ್ ಅಹಮದ್, ಡಾ.ಬಿ.ಎನ್.ಪ್ರಭಾಕರ್, ಡಾ.ಮೋಹನ್, ಉಪನ್ಯಾಸಕರಾದ ಎಲ್.ಶ್ರೀನಿವಾಸ್, ಅನಿಲ್, ಮನೋರಂಜನ್, ನಂದನಾ, ಅಧೀಕ್ಷಕಿ ಅನಿತಾ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಕಾರ್ಯದರ್ಶಿ ಡಿ.ಎನ್.ಕೃಷ್ಣಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>