<p><strong>ಚಿಕ್ಕಬಳ್ಳಾಪುರ:</strong> ಮುಂಬೈನ ದಾದರ್ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳಿಗೆ ಶಿಕ್ಷೆ ವಿಧಿಸುವ ಜತೆಗೆ ರಾಜಗೃಹವನ್ನು ರಾಷ್ಟ್ರ ಸ್ಮಾರಕವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ರಿಪಬ್ಲಿಕನ್ ಪಕ್ಷದ (ಆರ್ಪಿಐ) ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಅವರ ಮೂಲಕ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಆರ್ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ, ‘ಮುಂಬೈನಲ್ಲಿರುವ ಅಂಬೇಡ್ಕರ್ ನಿವಾಸ ‘ರಾಜಗೃಹ’ದ ಮೇಲೆ ಜುಲೈ 7ರಂದು ನಡೆದ ದಾಳಿಯನ್ನು ಆರ್ಪಿಐ ತೀವ್ರವಾಗಿ ಖಂಡಿಸುತ್ತದೆ’ ಎಂದು ತಿಳಿಸಿದರು.</p>.<p>‘ಪೊಲೀಸರು ಈ ಘಟನೆಯ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಹಾಗೆಯೇ ಈ ಘಟನೆಯ ಹಿಂದಿರುವ ಕುತಂತ್ರಿಗಳ ಕೈವಾಡವನ್ನು ಬಹಿರಂಗಪಡಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅಪ್ರತಿಮ ಜ್ಞಾನಿ, ಈ ಮಹಾಪುರುಷ ತಾನು ಬದುಕಿದ್ದ ಕಾಲಘಟ್ಟದಲ್ಲಿ ತಾನೇ ವಿನ್ಯಾಸಗೊಳಿಸಿ ಕಟ್ಟಿಸಿ, ಬದುಕಿ ಬಾಳಿದ್ದ ಅಂಬೇಡ್ಕರರ ಕನಸಿನ ಮನೆ ರಾಜಗೃಹದ ಮೇಲೆ ವಿಕೃತ ಮನಸ್ಸಿನ ಭಯೋತ್ಪಾದಕ ದುಷ್ಕರ್ಮಿಗಳು ದಾಳಿ ಮಾಡಿ ದ್ವಂಸಗೊಳಿಸಿರುವುದು ತುಂಬಾ ಆಘಾತಕಾರಿ ಸಂಗತಿಯಾಗಿದೆ’ ಎಂದರು.</p>.<p>‘ಕೆಲ ಮತೀಯವಾದಿಗಳು ಅಂಬೇಡ್ಕರ್ ಕುಟುಂಬದವರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಲೇ ಇದ್ದಾರೆ. ಇದರಿಂದ ಅವರ ಮೌಲ್ಯವನ್ನು ನಾಶಪಡಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ತಿಳಿಸಿದರು.</p>.<p>‘ರಾಜಗೃಹ ಬಿಹಾರದಲ್ಲಿ ಅಂತರರಾಷ್ಟ್ರೀಯ ಬೌದ್ಧ, ಪ್ರೇಕ್ಷಣೀಯ ಮತ್ತು ಐತಿಹಾಸಿಕ ಸ್ಥಳವಾದುದನ್ನು ಸದಾ ನೆನೆಯಲೆಂದೇ ಅಂಬೇಡ್ಕರ್ ಅವರು ತಮ್ಮ ನಿವಾಸಕ್ಕೆ ರಾಜಗೃಹ ಎಂದು ನಾಮಕರಣ ಮಾಡಿದ್ದರು. ಹೀಗಾಗಿ, ಅದನ್ನು ಅಂತರರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜಗೃಹ ನಿವಾಸದಲ್ಲಿ ಬೃಹತ್ ಗ್ರಂಥಾಲಯವಿದೆ. ಕಿಡಿಗೇಡಿಗಳು ಅದಕ್ಕೂ ಬೆಂಕಿ ಹಚ್ಚಲು ಹೇಸುವುದಿಲ್ಲ. ಅದಕ್ಕಾಗಿ ರಾಜಗೃಹ, ಮುದ್ರಣಾಲಯ, ಚೈತ್ಯಭೂಮಿ, ದೀಕ್ಷಾ ಭೂಮಿ ರಕ್ಷಿಸಬೇಕು. ಜೊತೆಗೆ ಅಂಬೇಡ್ಕರ್ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು’ ಹೇಳಿದರು.</p>.<p>ಆರ್ಪಿಐ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎಚ್.ನರಸಿಂಹಪ್ಪ, ಉಪಾಧ್ಯಕ್ಷರಾದ ಮುನಿಶಾಮಪ್ಪ, ಈಶ್ವರಪ್ಪ, ಕಾರ್ಯದರ್ಶಿ ವೆಂಕಟೇಶಪ್ಪ, ಪದಾಧಿಕಾರಿಗಳಾದ ಪ್ರಕಾಶ್, ಮುನಿರಾಜು, ವೇಣು, ಹರಿಪ್ರಕಾಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮುಂಬೈನ ದಾದರ್ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಗೃಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳಿಗೆ ಶಿಕ್ಷೆ ವಿಧಿಸುವ ಜತೆಗೆ ರಾಜಗೃಹವನ್ನು ರಾಷ್ಟ್ರ ಸ್ಮಾರಕವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ರಿಪಬ್ಲಿಕನ್ ಪಕ್ಷದ (ಆರ್ಪಿಐ) ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಅವರ ಮೂಲಕ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಆರ್ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ, ‘ಮುಂಬೈನಲ್ಲಿರುವ ಅಂಬೇಡ್ಕರ್ ನಿವಾಸ ‘ರಾಜಗೃಹ’ದ ಮೇಲೆ ಜುಲೈ 7ರಂದು ನಡೆದ ದಾಳಿಯನ್ನು ಆರ್ಪಿಐ ತೀವ್ರವಾಗಿ ಖಂಡಿಸುತ್ತದೆ’ ಎಂದು ತಿಳಿಸಿದರು.</p>.<p>‘ಪೊಲೀಸರು ಈ ಘಟನೆಯ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಹಾಗೆಯೇ ಈ ಘಟನೆಯ ಹಿಂದಿರುವ ಕುತಂತ್ರಿಗಳ ಕೈವಾಡವನ್ನು ಬಹಿರಂಗಪಡಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅಪ್ರತಿಮ ಜ್ಞಾನಿ, ಈ ಮಹಾಪುರುಷ ತಾನು ಬದುಕಿದ್ದ ಕಾಲಘಟ್ಟದಲ್ಲಿ ತಾನೇ ವಿನ್ಯಾಸಗೊಳಿಸಿ ಕಟ್ಟಿಸಿ, ಬದುಕಿ ಬಾಳಿದ್ದ ಅಂಬೇಡ್ಕರರ ಕನಸಿನ ಮನೆ ರಾಜಗೃಹದ ಮೇಲೆ ವಿಕೃತ ಮನಸ್ಸಿನ ಭಯೋತ್ಪಾದಕ ದುಷ್ಕರ್ಮಿಗಳು ದಾಳಿ ಮಾಡಿ ದ್ವಂಸಗೊಳಿಸಿರುವುದು ತುಂಬಾ ಆಘಾತಕಾರಿ ಸಂಗತಿಯಾಗಿದೆ’ ಎಂದರು.</p>.<p>‘ಕೆಲ ಮತೀಯವಾದಿಗಳು ಅಂಬೇಡ್ಕರ್ ಕುಟುಂಬದವರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಲೇ ಇದ್ದಾರೆ. ಇದರಿಂದ ಅವರ ಮೌಲ್ಯವನ್ನು ನಾಶಪಡಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ತಿಳಿಸಿದರು.</p>.<p>‘ರಾಜಗೃಹ ಬಿಹಾರದಲ್ಲಿ ಅಂತರರಾಷ್ಟ್ರೀಯ ಬೌದ್ಧ, ಪ್ರೇಕ್ಷಣೀಯ ಮತ್ತು ಐತಿಹಾಸಿಕ ಸ್ಥಳವಾದುದನ್ನು ಸದಾ ನೆನೆಯಲೆಂದೇ ಅಂಬೇಡ್ಕರ್ ಅವರು ತಮ್ಮ ನಿವಾಸಕ್ಕೆ ರಾಜಗೃಹ ಎಂದು ನಾಮಕರಣ ಮಾಡಿದ್ದರು. ಹೀಗಾಗಿ, ಅದನ್ನು ಅಂತರರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜಗೃಹ ನಿವಾಸದಲ್ಲಿ ಬೃಹತ್ ಗ್ರಂಥಾಲಯವಿದೆ. ಕಿಡಿಗೇಡಿಗಳು ಅದಕ್ಕೂ ಬೆಂಕಿ ಹಚ್ಚಲು ಹೇಸುವುದಿಲ್ಲ. ಅದಕ್ಕಾಗಿ ರಾಜಗೃಹ, ಮುದ್ರಣಾಲಯ, ಚೈತ್ಯಭೂಮಿ, ದೀಕ್ಷಾ ಭೂಮಿ ರಕ್ಷಿಸಬೇಕು. ಜೊತೆಗೆ ಅಂಬೇಡ್ಕರ್ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು’ ಹೇಳಿದರು.</p>.<p>ಆರ್ಪಿಐ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎಚ್.ನರಸಿಂಹಪ್ಪ, ಉಪಾಧ್ಯಕ್ಷರಾದ ಮುನಿಶಾಮಪ್ಪ, ಈಶ್ವರಪ್ಪ, ಕಾರ್ಯದರ್ಶಿ ವೆಂಕಟೇಶಪ್ಪ, ಪದಾಧಿಕಾರಿಗಳಾದ ಪ್ರಕಾಶ್, ಮುನಿರಾಜು, ವೇಣು, ಹರಿಪ್ರಕಾಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>