ಮಾಡಿಕೆರೆಯ ಮಾವು ಅಭಿವೃದ್ಧಿ ಕೇಂದ್ರ ನನ್ನ ಕೂಸು. ಅದು ನಿರೀಕ್ಷೆಗೆ ತಕ್ಕಂತೆ ಬಳಕೆಯಾಗುತ್ತಿಲ್ಲ. ಕೇಂದ್ರವನ್ನು ರೈತರಿಗೆ ಉಪಯುಕ್ತವಾಗಿ ಮಾಡಲು ಖಂಡಿತ ಕ್ರಮಕೈಗೊಳ್ಳಲಾಗುವುದು.
ಡಾ.ಎಂ.ಸಿ.ಸುಧಾಕರ್, ಶಾಸಕ
ಮಾವು ಅಭಿವೃದ್ಧಿ ಮಂಡಳಿ ಆನ್ಲೈನ್ ಮೂಲಕ ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿತ್ತು. ಖರೀದಿದಾರರು ಆನ್ಲೈನ್ ಮೂಲಕ ಅಥವಾ ದೂರವಾಣಿ ಮೂಲಕ ಆರ್ಡರ್ ನೀಡುತ್ತಿದ್ದರು. ಗ್ರಾಹಕರೊಂದಿಗೆ ನೇರ ಸಂಪರ್ಕ ಸಾಧಿಸಿ, ದಳ್ಳಾಳಿಗಳ ಕಾಟ ತಪ್ಪುತ್ತಿತ್ತು.
ಮುನಿರೆಡ್ಡಿ ಮಾವು ಬೆಳೆಗಾರ. ಅಕ್ಕಿಮಂಗಲ.
ಮಾವು ಕೋಯ್ಲೋತ್ತರ ಅಭಿವೃದ್ಧಿ ಕೇಂದ್ರವು ರೈತರಿಗೆ ವರದಾನವಾಗಿತ್ತು. ಮಾವು ಬೆಳೆಗಾರರು ಉತ್ತಮ ಗುಣಮಟ್ಟ ಹಾಗೂ ಹೆಚ್ಚಿನ ಇಳುವರಿ ಪಡೆಯಲು ಅಗತ್ಯವಾದ ತರಬೇತಿ ಪ್ರಾತ್ಯಕ್ಷಿಕೆ ನೀಡುತ್ತಿದ್ದರು. ಬೆಳೆಗಾರರಿಗೆ ಸಬ್ಸಿಡಿ ದರದಲ್ಲಿ ಮಾವು ಸ್ಪೆಷಲ್, ಔಷಧಿಗಳು, ಹಲವಾರು ಪರಿಕರಗಳು, ರಫ್ತು ಮಾಡಲು ಅಗತ್ಯವಾದ ರಟ್ಟಿನ ಬಾಕ್ಸ್, ಪ್ಲಾಸ್ಟಿಕ್ ಕ್ರೇಟ್ಸ್ ಸಿಗುತ್ತಿದ್ದವು.
ರಘುನಾಥರೆಡ್ಡಿ ರೈತ ಮುಖಂಡ.
ಮಾವು ಬೆಳೆಗಾರರಿಗೆ ಅನುಕೂಲವಾದ ಕೇಂದ್ರವನ್ನು ಸ್ಥಗಿತಗೊಳಿಸಿ, ತೋಟಗಾರಿಕೆ ಇಲಾಖೆಯ ವಶಕ್ಕೆ ನೀಡಲು ತೆರೆಮರೆಯ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಅದು ನಿಜವಾದರೆ ರೈತರು ಉಗ್ರವಾದ ಹೋರಾಟ ಅನಿವಾರ್ಯವಾಗುತ್ತದೆ.