<p><strong>ಚಿಕ್ಕಬಳ್ಳಾಪುರ</strong>: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿದ್ದು ಮತ್ತು ಅವರ ಮೇಲೆ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. </p>.<p>ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಸಂಘಟನೆಗಳ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಇಡೀ ದೇಶವೇ ಈ ದುರ್ಘಟನೆಯಿಂದ ತಲೆ ತಗ್ಗಿಸುವಂತೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಮುಖಂಡರಾದ ಬಿ.ಕಿರಣ್ ನಾಯಕ್ ಮಾತನಾಡಿ, ‘ಈ ದುರ್ಘಟನೆ ನಡೆದು 20ಕ್ಕೂ ಹೆಚ್ಚು ದಿನ ಆಗಿದೆ. ಹೆಣ್ಣು ಮಕ್ಕಳ ಮೇಲೆ ನಡೆದ ಈ ಭೀಭತ್ಯ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ರಾಷ್ಟ್ರಪತಿ ಸಹ ಹೆಣ್ಣಾಗಿದ್ದು ಅವರು ಈ ಬಗ್ಗೆ ಒಂದೂ ಮಾತನಾಡಿಲ್ಲ. ಇದು ಬೇಸರ ತರಿಸಿದೆ ಎಂದು ಹೇಳಿದರು. </p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ದುಷ್ಟ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆಗಳು ದೇಶದ ಯಾವ ಭಾಗದಲ್ಲಿಯೂ ಮುಂದೆ ನಡೆಯಬಾರದು ಎಂದರು.</p>.<p>ಮುಖಂಡರಾದ ಸುಷ್ಮಾ ಶ್ರೀನಿವಾಸ್, ಮುರಳೀಧರ್, ಸೌಭಾಗ್ಯಮ್ಮ, ಕೆ.ಸಿ.ಮಮತಾ, ಸುಬ್ರಮಣ್ಯಂ, ಕೃಷ್ಣಪ್ಪ, ಅಮೃತ, ಡಿ.ಭವ್ಯ, ಕಾವ್ಯ, ಭಾಗ್ಯ, ವಿಜಯಲಕ್ಷ್ಮಿ, ಇಬ್ರಾಹಿಂ, ವೆಂಕಟರೆಡ್ಡಿ,<br>ಗೌಸ್ ಪಾಷ, ಸಮೀರ್, ಮೌಲ, ಸಂತೋಷ್, ರೇಷ್ಮಾ, ಐಶ್ವರ್ಯ, ಮಂಜುನಾಥ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿದ್ದು ಮತ್ತು ಅವರ ಮೇಲೆ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. </p>.<p>ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಸಂಘಟನೆಗಳ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಇಡೀ ದೇಶವೇ ಈ ದುರ್ಘಟನೆಯಿಂದ ತಲೆ ತಗ್ಗಿಸುವಂತೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಮುಖಂಡರಾದ ಬಿ.ಕಿರಣ್ ನಾಯಕ್ ಮಾತನಾಡಿ, ‘ಈ ದುರ್ಘಟನೆ ನಡೆದು 20ಕ್ಕೂ ಹೆಚ್ಚು ದಿನ ಆಗಿದೆ. ಹೆಣ್ಣು ಮಕ್ಕಳ ಮೇಲೆ ನಡೆದ ಈ ಭೀಭತ್ಯ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ರಾಷ್ಟ್ರಪತಿ ಸಹ ಹೆಣ್ಣಾಗಿದ್ದು ಅವರು ಈ ಬಗ್ಗೆ ಒಂದೂ ಮಾತನಾಡಿಲ್ಲ. ಇದು ಬೇಸರ ತರಿಸಿದೆ ಎಂದು ಹೇಳಿದರು. </p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ದುಷ್ಟ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆಗಳು ದೇಶದ ಯಾವ ಭಾಗದಲ್ಲಿಯೂ ಮುಂದೆ ನಡೆಯಬಾರದು ಎಂದರು.</p>.<p>ಮುಖಂಡರಾದ ಸುಷ್ಮಾ ಶ್ರೀನಿವಾಸ್, ಮುರಳೀಧರ್, ಸೌಭಾಗ್ಯಮ್ಮ, ಕೆ.ಸಿ.ಮಮತಾ, ಸುಬ್ರಮಣ್ಯಂ, ಕೃಷ್ಣಪ್ಪ, ಅಮೃತ, ಡಿ.ಭವ್ಯ, ಕಾವ್ಯ, ಭಾಗ್ಯ, ವಿಜಯಲಕ್ಷ್ಮಿ, ಇಬ್ರಾಹಿಂ, ವೆಂಕಟರೆಡ್ಡಿ,<br>ಗೌಸ್ ಪಾಷ, ಸಮೀರ್, ಮೌಲ, ಸಂತೋಷ್, ರೇಷ್ಮಾ, ಐಶ್ವರ್ಯ, ಮಂಜುನಾಥ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>