‘ಮಾರುಕಟ್ಟೆ ಆವರಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇರುವ ಸಂಪುಗಳಲ್ಲಿ ಹುಳಗಳು ಹರಿದಾಡುತ್ತಿವೆ. ಹದಗೆಟ್ಟ ಮತ್ತು ಕಿರಿದಾದ ರಸ್ತೆಗಳಿಂದಾಗಿ ನಿತ್ಯ ಮಾರುಕಟ್ಟೆ ಒಳಗೆ ಮತ್ತು ಹೊರಗೆ ವಾಹನ ದಟ್ಟಣೆ ಉಂಟಾಗಿ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಶೌಚಾಲಯವಂತೂ ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರುತ್ತಿವೆ. ಜಿಲ್ಲಾಧಿಕಾರಿ ಅವರು ಮಾರುಕಟ್ಟೆ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಕರವೇ ಪದಾಧಿಕಾರಿಗಳಾದ ಲೋಕೇಶ್, ಎಸ್ ರುಕ್ಮಿಣಿ, ನವೀನ್ ಕುಮಾರ್, ಸುಮಿತ್ರಮ್ಮ ಹಾಜರಿದ್ದರು.