ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಎಪಿಎಂಸಿ ಅವ್ಯವಸ್ಥೆ; ಲೋಕಾಯುಕ್ತಕ್ಕೆ ವರದಿ

ಜಿಲ್ಲೆಯ ಲೋಕಾಯುಕ್ತ ಪೊಲೀಸರಿಂದ ಮಾರುಕಟ್ಟೆ ಪರಿಶೀಲನೆ
Last Updated 19 ಮಾರ್ಚ್ 2023, 6:07 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಲೋಕಾಯುಕ್ತ ಕಚೇರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಜಿಲ್ಲಾ ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ವರದಿ ‌ಸಿದ್ಧಗೊಳಿಸಿದ್ದಾರೆ.

ಎಪಿಎಂಸಿಗೆ ಲೋಕಾಯುಕ್ತ ಎಸ್‌ಪಿ ಪವನ್ ನೆಜ್ಜೂರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ದಾಖಲೆಗಳು ಸೇರಿದಂತೆ ಆವರಣವನ್ನು ಪರಿಶೀಲಿಸಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಎ‍ಪಿಎಂಸಿಯಲ್ಲಿ ಹಲವು ಅವ್ಯವಸ್ಥೆಗಳು ‌ಕಂಡು ಬಂದಿದೆ. ಈ ಬಗ್ಗೆ ವಿಸ್ತೃತ ವರದಿಯನ್ನು ಸಿದ್ಧಗೊಳಿಸಲು ಮುಂದಾಗಿದ್ದಾರೆ.

ಎಪಿಎಂಸಿ ಕಚೇರಿ ಹಾಗೂ ಪ್ರಾಂಗಣವನ್ನು ಪರಿಶೀಲಿಸಲಾಗಿ ಮೂಲಸೌಕರ್ಯಗಳ ಕೊರತೆ ಇರುವುದು ಕಂಡು ಬಂದಿದೆ. ಎಪಿಎಂಸಿ ನೀಡಿರುವ ಪರವಾನಗಿ ಪ್ರಕ್ರಿಯೆಗಳಲ್ಲಿ ನಿಯಮದ ಅನುಸಾರವೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳಿಗೆ ಮತ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಲೋಕಾಯುಕ್ತರು ತಿಳಿಸಿದ್ದಾರೆ. ‌

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಮತ್ತು ಪರವಾನಗಿಗಳು ನಿಯಮಾವಳಿಗಳ ಪ್ರಕಾರವಿಲ್ಲ ಎಂದು ಕೆಲವರು ವರ್ತಕರು ಹಾಗೂ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಪಿಎಂಸಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT