<p><strong>ಚಿಕ್ಕಬಳ್ಳಾಪುರ</strong>: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಲೋಕಾಯುಕ್ತ ಕಚೇರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಜಿಲ್ಲಾ ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ವರದಿ ಸಿದ್ಧಗೊಳಿಸಿದ್ದಾರೆ. </p>.<p>ಎಪಿಎಂಸಿಗೆ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ದಾಖಲೆಗಳು ಸೇರಿದಂತೆ ಆವರಣವನ್ನು ಪರಿಶೀಲಿಸಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಎಪಿಎಂಸಿಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದಿದೆ. ಈ ಬಗ್ಗೆ ವಿಸ್ತೃತ ವರದಿಯನ್ನು ಸಿದ್ಧಗೊಳಿಸಲು ಮುಂದಾಗಿದ್ದಾರೆ.</p>.<p>ಎಪಿಎಂಸಿ ಕಚೇರಿ ಹಾಗೂ ಪ್ರಾಂಗಣವನ್ನು ಪರಿಶೀಲಿಸಲಾಗಿ ಮೂಲಸೌಕರ್ಯಗಳ ಕೊರತೆ ಇರುವುದು ಕಂಡು ಬಂದಿದೆ. ಎಪಿಎಂಸಿ ನೀಡಿರುವ ಪರವಾನಗಿ ಪ್ರಕ್ರಿಯೆಗಳಲ್ಲಿ ನಿಯಮದ ಅನುಸಾರವೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳಿಗೆ ಮತ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಲೋಕಾಯುಕ್ತರು ತಿಳಿಸಿದ್ದಾರೆ. </p>.<p>ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಮತ್ತು ಪರವಾನಗಿಗಳು ನಿಯಮಾವಳಿಗಳ ಪ್ರಕಾರವಿಲ್ಲ ಎಂದು ಕೆಲವರು ವರ್ತಕರು ಹಾಗೂ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಪಿಎಂಸಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಲೋಕಾಯುಕ್ತ ಕಚೇರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಜಿಲ್ಲಾ ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ವರದಿ ಸಿದ್ಧಗೊಳಿಸಿದ್ದಾರೆ. </p>.<p>ಎಪಿಎಂಸಿಗೆ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ದಾಖಲೆಗಳು ಸೇರಿದಂತೆ ಆವರಣವನ್ನು ಪರಿಶೀಲಿಸಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಎಪಿಎಂಸಿಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದಿದೆ. ಈ ಬಗ್ಗೆ ವಿಸ್ತೃತ ವರದಿಯನ್ನು ಸಿದ್ಧಗೊಳಿಸಲು ಮುಂದಾಗಿದ್ದಾರೆ.</p>.<p>ಎಪಿಎಂಸಿ ಕಚೇರಿ ಹಾಗೂ ಪ್ರಾಂಗಣವನ್ನು ಪರಿಶೀಲಿಸಲಾಗಿ ಮೂಲಸೌಕರ್ಯಗಳ ಕೊರತೆ ಇರುವುದು ಕಂಡು ಬಂದಿದೆ. ಎಪಿಎಂಸಿ ನೀಡಿರುವ ಪರವಾನಗಿ ಪ್ರಕ್ರಿಯೆಗಳಲ್ಲಿ ನಿಯಮದ ಅನುಸಾರವೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳಿಗೆ ಮತ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಲೋಕಾಯುಕ್ತರು ತಿಳಿಸಿದ್ದಾರೆ. </p>.<p>ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಮತ್ತು ಪರವಾನಗಿಗಳು ನಿಯಮಾವಳಿಗಳ ಪ್ರಕಾರವಿಲ್ಲ ಎಂದು ಕೆಲವರು ವರ್ತಕರು ಹಾಗೂ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಪಿಎಂಸಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>