ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸಾಮೂಹಿಕ ಪ್ರಾರ್ಥನೆ; ಮಾತಿನ ಚಕಮಕಿ

Last Updated 4 ಅಕ್ಟೋಬರ್ 2021, 4:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಕಂದವಾರದಲ್ಲಿ ಭಾನುವಾರ ಕ್ರೈಸ್ತ ಪಾದ್ರಿಗಳು ಮನೆಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಮಾತಿನ ಚಕಮಕಿಗೆ ಕಾರಣವಾಗಿದೆ.

ಕಂದವಾರದಲ್ಲಿ ಭಾರತಿ ಎಂಬುವರ ಮನೆಯಲ್ಲಿ ಬೆಂಗಳೂರಿನ ಪಾದ್ರಿ ಧ್ಯಾನ್ ಮತ್ತು ಮೇಲುಕೋಟೆಯ ಪ್ರದೀಪ್ ಪ್ರಾರ್ಥನೆ ನಡೆಸುತ್ತಿದ್ದರು. ಅಲ್ಲಿಗೆ ಬಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ‘ಇಲ್ಲಿ ಏಕೆ ಪ್ರಾರ್ಥನೆ ನಡೆಸುತ್ತಿದ್ದೀರಿ. ಚರ್ಚ್‌ನಲ್ಲಿ ಪ್ರಾರ್ಥನೆ ನಡೆಬೇಕಿತ್ತು. ಮಕ್ಕಳನ್ನೂ ಕೂರಿಸಿಕೊಂಡಿದ್ದಿರಿ. ಇದು ಮತಾಂತರಕ್ಕೆ ಪ್ರಯತ್ನಿಸುತ್ತಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ನಗರ ಠಾಣೆ ಇನ್‌ಸ್ಪೆಕ್ಟರ್ ಹೊನ್ನೇಗೌಡ ಭೇಟಿ ನೀಡಿದರು. ರಾಘವೇಂದ್ರ, ರವಿ, ಮಂಜುನಾಥ್, ಹರೀಶ್, ಸುಧಾಕರ್, ತಿಲಕ್, ಬಾನು, ಮುರುಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT