<p><strong>ಗೌರಿಬಿದನೂರು:</strong>ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ30 ಕೋತಿಗಳು ಸಾವನ್ನಪ್ಪಿವೆ. ಕೋತಿಗಳ ಕಾಟ ತಾಳಲಾರದೆ ಗ್ರಾಮಸ್ಥರು ಅವುಗಳಿಗೆ ವಿಷವುಣಿಸಿದ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 50ಕ್ಕೂ ಹೆಚ್ಚು ಕೋತಿಗಳನ್ನು ಹಿಡಿದು ಬೋನಿನಲ್ಲಿ ಬಂಧಿಸಿ ಇಡಲಾಗಿತ್ತು. ರಾತ್ರಿ ಬೋನಿನಲ್ಲಿದ್ದ ಕೆಲವು ಕೋತಿಗಳು ಏಕಾಏಕಿ ಅಸ್ವಸ್ಥಗೊಂಡು, ಮೂರ್ಛೆ ಹೋಗಿವೆ. ಆ ಪೈಕಿ 30ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.</p>.<p>ಸತ್ತ ಮತ್ತು ಬದುಕುಳಿದ ಕೋತಿಗಳನ್ನು ರಾತ್ರೋರಾತ್ರಿ ಟ್ರ್ಯಾಕ್ಟರ್ನಲ್ಲಿಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿಸಾಗಿಸಲಾಗುತ್ತಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಹಿಂದೂ ಜಾಗರಣ ವೇದಿಕೆಯ (ಹಿಂಜಾವೆ) ಸದಸ್ಯರುಟ್ರ್ಯಾಕ್ಟರ್ ಹಾಗೂ ಚಾಲಕನನ್ನು ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.</p>.<p>ಬದುಕುಳಿದ ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.</p>.<p><strong>ವಿಷ ಹಾಕಿದ ಶಂಕೆ:</strong> ಗ್ರಾಮದ ಮುಖಂಡರೊಬ್ಬರ ಅಣತಿಯಂತೆ ಕೋತಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಪ್ರಕರಣವನ್ನು ಮುಚ್ಚಿ ಹಾಕಲು ರಾತ್ರೋರಾತ್ರಿ ರೈಲ್ವೆ ಹಳಿಯ ಬಳಿ ಕೋತಿಗಳ ಶವ ಬಿಸಾಡಲು ಯತ್ನಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಹಿಂಜಾವೆ ಸದಸ್ಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong>ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ30 ಕೋತಿಗಳು ಸಾವನ್ನಪ್ಪಿವೆ. ಕೋತಿಗಳ ಕಾಟ ತಾಳಲಾರದೆ ಗ್ರಾಮಸ್ಥರು ಅವುಗಳಿಗೆ ವಿಷವುಣಿಸಿದ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 50ಕ್ಕೂ ಹೆಚ್ಚು ಕೋತಿಗಳನ್ನು ಹಿಡಿದು ಬೋನಿನಲ್ಲಿ ಬಂಧಿಸಿ ಇಡಲಾಗಿತ್ತು. ರಾತ್ರಿ ಬೋನಿನಲ್ಲಿದ್ದ ಕೆಲವು ಕೋತಿಗಳು ಏಕಾಏಕಿ ಅಸ್ವಸ್ಥಗೊಂಡು, ಮೂರ್ಛೆ ಹೋಗಿವೆ. ಆ ಪೈಕಿ 30ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.</p>.<p>ಸತ್ತ ಮತ್ತು ಬದುಕುಳಿದ ಕೋತಿಗಳನ್ನು ರಾತ್ರೋರಾತ್ರಿ ಟ್ರ್ಯಾಕ್ಟರ್ನಲ್ಲಿಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿಸಾಗಿಸಲಾಗುತ್ತಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಹಿಂದೂ ಜಾಗರಣ ವೇದಿಕೆಯ (ಹಿಂಜಾವೆ) ಸದಸ್ಯರುಟ್ರ್ಯಾಕ್ಟರ್ ಹಾಗೂ ಚಾಲಕನನ್ನು ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.</p>.<p>ಬದುಕುಳಿದ ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.</p>.<p><strong>ವಿಷ ಹಾಕಿದ ಶಂಕೆ:</strong> ಗ್ರಾಮದ ಮುಖಂಡರೊಬ್ಬರ ಅಣತಿಯಂತೆ ಕೋತಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಪ್ರಕರಣವನ್ನು ಮುಚ್ಚಿ ಹಾಕಲು ರಾತ್ರೋರಾತ್ರಿ ರೈಲ್ವೆ ಹಳಿಯ ಬಳಿ ಕೋತಿಗಳ ಶವ ಬಿಸಾಡಲು ಯತ್ನಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಹಿಂಜಾವೆ ಸದಸ್ಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>