ಚಿಕ್ಕಬಳ್ಳಾಪುರ: ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರಬುನಾದಿ ಹಂತದ ಭಾಷೆ ಮತ್ತು ಗಣಿತ ಅಭ್ಯಾಸಗಳ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಣ ಫೌಂಡೇಶನ್ ಮತ್ತು ಶಿಕ್ಷಣ ಇಲಾಖೆ ಆಶ್ರಮದಲ್ಲಿ ಕಾರ್ಯಕ್ರಮ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಫೌಂಡೇಶನ್ನಿಂದ ಬುನಾದಿ ಹಂತದ ಕನ್ನಡ, ಇಂಗ್ಲಿಷ್ ಮತ್ತು ಗಣಿತ ಅಭ್ಯಾಸ ಪುಸ್ತಕಗಳು ಮಕ್ಕಳ ಕಲಿಕೆಗೆ ಸಹಕಾರಿ ಆಗಿದೆ ಎಂದು ಹೇಳಿದರು.
ಶಿಕ್ಷಣ ಫೌಂಡೇಶನ್ ಸಂಸ್ಥೆ ನಿರ್ದೇಶಕ ನವೀನ್ ಚಿಕ್ಕಣ್ಣ ಮಾತನಾಡಿ, ಚಿಕ್ಕಬಳ್ಳಾಪುರ ತಾಲ್ಲೂಕಿನ 50 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದೇವೆ. ಮೂರು ಮಾರ್ಗದರ್ಶಕರು ಹಾಗೂ ತಾಲ್ಲೂಕಿನ ಸಂಯೋಜಕರು ಇದರಿಂದ ಪಾಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಅರುಣ್ ಕುಮಾರ್, ಸರ್ಕಾರಿ ನೌಕರರ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಸುನೀಲ್, ದಾನಿಗಳಾದ ಬಿ.ಆರ್. ರಘುನಾಥ ರೆಡ್ಡಿ, ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಚಂದ್ರಶೇಖರ್ ರೆಡ್ಡಿ, ಆಂಜನೇಯ ರೆಡ್ಡಿ ಹಾಜರಿದ್ದರು.