<p><strong>ಚಿಂತಾಮಣಿ: </strong>ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸುವ ಉದ್ದೇಶದಿಂದ ಜಾರಿಗೆ ತಂದ ಮಾತೃವಂದನಾ ಯೋಜನೆ ತಾಲ್ಲೂಕಿನಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ.</p>.<p>ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕತೆ ಕುರಿತು ಶಿಕ್ಷಣ, ಆರೋಗ್ಯ ಸಲಹೆ ನೀಡುವ ಸಲುವಾಗಿ 2010- 11ರಲ್ಲಿ ಇಂದಿರಾ ಗಾಂಧಿ ಮಾತೃತ್ವ ಸಹಯೋಗ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜಾರಿಗೆ ತರಲಾಗಿತ್ತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳು ಕಾರ್ಯಕ್ರಮ ಅನುಷ್ಠಾನಕ್ಕೆ ವೇದಿಕೆಯಾಗಿತ್ತು.</p>.<p>ಯೋಜನೆಯಡಿ, ಜುಲೈನಲ್ಲಿ 174, ಆಗಸ್ಟ್ನಲ್ಲಿ 176 ಗರ್ಭಿಣಿ– ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಗುರಿ ನೀಡಲಾಗಿತ್ತು. ಇದರಲ್ಲಿ ಶೇ 100ರಷ್ಟು ಗುರಿ ಸಾಧಿಸಿದ್ದೇವೆ ಎಂದು ಸಿಡಿಪಿಒ ಮಹೇಂದ್ರ ಮಾಹಿತಿ ನೀಡಿದರು.</p>.<p>2017-18ನೇ ಸಾಲಿನಿಂದ ಯೋಜನೆಯನ್ನು ‘ಪ್ರಧಾನ ಮಂತ್ರಿ ಮಾತೃವಂದಾ’ ಯೋಜನೆ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಈ ಯೋಜನೆಗೆ 60:40ರಂತೆ ಕೇಂದ್ರ- ರಾಜ್ಯ ಸರ್ಕಾರಗಳು ಅನುದಾನ ನೀಡಿವೆ.</p>.<p>ಮೂರು ಕಂತುಗಳಲ್ಲಿ ₹ 5 ಸಾವಿರ ನೀಡಲಾಗುತ್ತದೆ. ಅಪೌಷ್ಟಿಕತೆಯಿಂದ ಬಳಲುವ ಗರ್ಭಿಣಿಯರು ಕಡಿಮೆ ತೂಕದ ಮತ್ತು ಅನಾರೋಗ್ಯ ಪೀಡಿತ ಮಗುವಿಗೆ ಜನ್ಮ ನೀಡುವುದನ್ನು ತಡೆಯುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೂಲಕ ಗರ್ಭಿಣಿಯರನ್ನು ನೋಂದಾ ಯಿಸಿಕೊಂಡು ಅವರಿಗೆ ಯೋಜನೆಯ ಸೌಲಭ್ಯ ತಲುಪಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸುವ ಉದ್ದೇಶದಿಂದ ಜಾರಿಗೆ ತಂದ ಮಾತೃವಂದನಾ ಯೋಜನೆ ತಾಲ್ಲೂಕಿನಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ.</p>.<p>ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕತೆ ಕುರಿತು ಶಿಕ್ಷಣ, ಆರೋಗ್ಯ ಸಲಹೆ ನೀಡುವ ಸಲುವಾಗಿ 2010- 11ರಲ್ಲಿ ಇಂದಿರಾ ಗಾಂಧಿ ಮಾತೃತ್ವ ಸಹಯೋಗ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜಾರಿಗೆ ತರಲಾಗಿತ್ತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳು ಕಾರ್ಯಕ್ರಮ ಅನುಷ್ಠಾನಕ್ಕೆ ವೇದಿಕೆಯಾಗಿತ್ತು.</p>.<p>ಯೋಜನೆಯಡಿ, ಜುಲೈನಲ್ಲಿ 174, ಆಗಸ್ಟ್ನಲ್ಲಿ 176 ಗರ್ಭಿಣಿ– ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಗುರಿ ನೀಡಲಾಗಿತ್ತು. ಇದರಲ್ಲಿ ಶೇ 100ರಷ್ಟು ಗುರಿ ಸಾಧಿಸಿದ್ದೇವೆ ಎಂದು ಸಿಡಿಪಿಒ ಮಹೇಂದ್ರ ಮಾಹಿತಿ ನೀಡಿದರು.</p>.<p>2017-18ನೇ ಸಾಲಿನಿಂದ ಯೋಜನೆಯನ್ನು ‘ಪ್ರಧಾನ ಮಂತ್ರಿ ಮಾತೃವಂದಾ’ ಯೋಜನೆ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಈ ಯೋಜನೆಗೆ 60:40ರಂತೆ ಕೇಂದ್ರ- ರಾಜ್ಯ ಸರ್ಕಾರಗಳು ಅನುದಾನ ನೀಡಿವೆ.</p>.<p>ಮೂರು ಕಂತುಗಳಲ್ಲಿ ₹ 5 ಸಾವಿರ ನೀಡಲಾಗುತ್ತದೆ. ಅಪೌಷ್ಟಿಕತೆಯಿಂದ ಬಳಲುವ ಗರ್ಭಿಣಿಯರು ಕಡಿಮೆ ತೂಕದ ಮತ್ತು ಅನಾರೋಗ್ಯ ಪೀಡಿತ ಮಗುವಿಗೆ ಜನ್ಮ ನೀಡುವುದನ್ನು ತಡೆಯುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೂಲಕ ಗರ್ಭಿಣಿಯರನ್ನು ನೋಂದಾ ಯಿಸಿಕೊಂಡು ಅವರಿಗೆ ಯೋಜನೆಯ ಸೌಲಭ್ಯ ತಲುಪಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>