<p><strong>ಗೌರಿಬಿದನೂರು</strong>: ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಹುಸೆನ್ಪುರದಲ್ಲಿ ಆಯೋಜಿಸಿದ್ದ ಬಾಬಯ್ಯ ಹಬ್ಬದ ಆಚರಣೆಯಲ್ಲಿ ಕೆಎಚ್ಪಿ ಫೌಂಡೇಷನ್ ಅಧ್ಯಕ್ಷ ಕೆ.ಎಚ್. ಪುಟ್ಟಸ್ವಾಮಿಗೌಡ ಭಾಗವಹಿಸಿದ್ದರು.</p>.<p>ಬಳಿಕ ಮಾತನಾಡಿದ ಅವರು, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಗ್ರಾಮಗಳಲ್ಲಿ ಮುಸ್ಲಿಂ ಮತ್ತು ಹಿಂದೂಗಳು ಶ್ರದ್ಧಾಭಕ್ತಿಯಿಂದ ಆಚರಿಸುವ ಈ ಹಬ್ಬವು ಜನರಲ್ಲಿ ಸಾಮರಸ್ಯ ಮತ್ತು ಭಾವೈಕ್ಯ ಬೆಳೆಸಲು ಸಹಕಾರಿಯಾಗುತ್ತದೆ. ಇಂತಹ ಧಾರ್ಮಿಕ ಆಚರಣೆಗಳು ಗ್ರಾಮದಲ್ಲಿ ನಡೆಯುವುದರಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು ಮಾತನಾಡಿ, ಗ್ರಾಮೀಣ ನಿತ್ಯದ ಶ್ರಮದ ಕಾರ್ಯಗಳ ನಡುವೆ ಆಚರಿ ಸುವ ಈ ಧಾರ್ಮಿಕ ಕ್ರಿಯೆಗಳು ನಿಜಕ್ಕೂ ಭಾವನಾತ್ಮಕ ಸಂಬಂಧಗಳನ್ನು ಮೂಡಿಸುತ್ತವೆ. ನಂಬಿಕೆ ಮತ್ತು ವಿಶ್ವಾಸಗಳು ಗಟ್ಟಿಗೊಳ್ಳಲು ಆಚರಣೆಗಳು ಸಹಕಾರಿಯಾಗುತ್ತವೆ. ಇಂತಹ ಧಾರ್ಮಿಕ ಆಚರಣೆಗಳಿಗೆ ಪುಟ್ಟಸ್ವಾಮಿಗೌಡ ಸಹಕಾರ ಸದಾ ಇರುತ್ತದೆ ಎಂದು ಹೇಳಿದರು.</p>.<p>ಮುಖಂಡರಾದ ಪಿ.ಎನ್.ಶಿವಶಂಕರರೆಡ್ಡಿ, ಗಂಗಾಚಾರಿ, ಶ್ರೀಕುಮಾರ್, ಶಿವಶಂಕರ್, ರಾಮಕೃಷ್ಣ, ಆರ್.ಎನ್.ವೆಂಕಟೇಶರೆಡ್ಡಿ, ನಾಗಾರ್ಜುನ, ನಾಗರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಹುಸೆನ್ಪುರದಲ್ಲಿ ಆಯೋಜಿಸಿದ್ದ ಬಾಬಯ್ಯ ಹಬ್ಬದ ಆಚರಣೆಯಲ್ಲಿ ಕೆಎಚ್ಪಿ ಫೌಂಡೇಷನ್ ಅಧ್ಯಕ್ಷ ಕೆ.ಎಚ್. ಪುಟ್ಟಸ್ವಾಮಿಗೌಡ ಭಾಗವಹಿಸಿದ್ದರು.</p>.<p>ಬಳಿಕ ಮಾತನಾಡಿದ ಅವರು, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಗ್ರಾಮಗಳಲ್ಲಿ ಮುಸ್ಲಿಂ ಮತ್ತು ಹಿಂದೂಗಳು ಶ್ರದ್ಧಾಭಕ್ತಿಯಿಂದ ಆಚರಿಸುವ ಈ ಹಬ್ಬವು ಜನರಲ್ಲಿ ಸಾಮರಸ್ಯ ಮತ್ತು ಭಾವೈಕ್ಯ ಬೆಳೆಸಲು ಸಹಕಾರಿಯಾಗುತ್ತದೆ. ಇಂತಹ ಧಾರ್ಮಿಕ ಆಚರಣೆಗಳು ಗ್ರಾಮದಲ್ಲಿ ನಡೆಯುವುದರಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು ಮಾತನಾಡಿ, ಗ್ರಾಮೀಣ ನಿತ್ಯದ ಶ್ರಮದ ಕಾರ್ಯಗಳ ನಡುವೆ ಆಚರಿ ಸುವ ಈ ಧಾರ್ಮಿಕ ಕ್ರಿಯೆಗಳು ನಿಜಕ್ಕೂ ಭಾವನಾತ್ಮಕ ಸಂಬಂಧಗಳನ್ನು ಮೂಡಿಸುತ್ತವೆ. ನಂಬಿಕೆ ಮತ್ತು ವಿಶ್ವಾಸಗಳು ಗಟ್ಟಿಗೊಳ್ಳಲು ಆಚರಣೆಗಳು ಸಹಕಾರಿಯಾಗುತ್ತವೆ. ಇಂತಹ ಧಾರ್ಮಿಕ ಆಚರಣೆಗಳಿಗೆ ಪುಟ್ಟಸ್ವಾಮಿಗೌಡ ಸಹಕಾರ ಸದಾ ಇರುತ್ತದೆ ಎಂದು ಹೇಳಿದರು.</p>.<p>ಮುಖಂಡರಾದ ಪಿ.ಎನ್.ಶಿವಶಂಕರರೆಡ್ಡಿ, ಗಂಗಾಚಾರಿ, ಶ್ರೀಕುಮಾರ್, ಶಿವಶಂಕರ್, ರಾಮಕೃಷ್ಣ, ಆರ್.ಎನ್.ವೆಂಕಟೇಶರೆಡ್ಡಿ, ನಾಗಾರ್ಜುನ, ನಾಗರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>