ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವೈದ್ಯಕೀಯ ಶಿಕ್ಷಣದಲ್ಲಿ ಚಿನ್ನದ ಪದಕ ಗಳಿಸಿದವರು, ಮೆರಿಟ್ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು, ಅದೇ ರೀತಿ ಹೊರ ದೇಶದ ವಿದ್ಯಾರ್ಥಿಗಳು ನಮ್ಮಲ್ಲಿ ಬಂದು ಅಧ್ಯಯನ ಮಾಡುವಂತಹ ಪ್ರತಿಭಾ ವಿನಿಮಯ ಯೋಜನೆಯನ್ನು ಈ ವರ್ಷದಿಂದಲೇ ಪರಿಚಯಿಸಲಾಗುತ್ತದೆ’ ಎಂದು ತಿಳಿಸಿದರು.