ಚಿಕ್ಕಬಳ್ಳಾಪುರ: ಗೌರಿಬಿದನೂರು ವ್ಯಕ್ತಿಗೆ ಕೋವಿಡ್ -19 ತಗಲಿರುವುದು ಸಂಜೆ ವೇಳೆಗೆ ದೃಢಪಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಚಾರ ತಿಳಿಸಿದರು.
ಶಂಕಿತ ವ್ಯಕ್ತಿಯ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದಾರೆ. ಅವರು ಸೇರಿದಂತೆ ಶಂಕಿತನ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಿ ತಪಾಸಣೆ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.