ವಿರೋಧಪಕ್ಷದ ನರಸಿಂಹರಾಜು ಮಾತನಾಡಿ, ಅನುದಾನ ಮಂಜೂರಾತಿಯಲ್ಲಿ ವಿರೋಧಪಕ್ಷದ ಸದಸ್ಯರ ಕ್ಷೇತ್ರಗಳ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ತಾಲ್ಲೂಕು ಪಂಚಾಯಿತಿ ಅನುದಾನದಿಂದ ನಮ್ಮ ಕ್ಷೇತ್ರಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ. ಈ ವರ್ಷವಾದರೂ ತಾರತಮ್ಯವಿಲ್ಲದೆ ಪಕ್ಷಾತೀತವಾಗಿ ಅನುದಾನ ಹಂಚಿಕೆ ಆಗಬೇಕು ಎಂದು ಒತ್ತಾಯಿಸಿದರು.