ಜಿಲ್ಲಾ ಸಂಘದ ಉಪಾಧ್ಯಕ್ಷ ಎನ್. ಲಕ್ಷ್ಮಿನಾರಾಯಣ, ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ವರದರಾಜನ್, ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಎನ್. ಶಿವರಾಮ್, ನಿವೃತ್ತ ಪ್ರಾಂಶುಪಾಲರಾದ ಅಶ್ವತ್ಥಮ್ಮ, ಸಯ್ಯದ್ ಗಫಾರ್, ಚಂದ್ರಶೇಖರಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದಾನಿಗಳು ಮತ್ತು ಕಲಾವಿದರನ್ನು ಸನ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಎಸ್. ಆಂಜನಪ್ಪ ವಾರ್ಷಿಕ ವರದಿ ಮಂಡಿಸಿದರು. ಸಂಘದಿಂದ ಗೋಡೆ ಕ್ಯಾಲೆಂಡರ್ ಮತ್ತು ಪಾಕೆಟ್ ಕ್ಯಾಲೆಂಡರ್ಗಳನ್ನು ಬಿಡುಗಡೆ ಮಾಡಲಾಯಿತು. ಎ.ಎಸ್. ರಾಮಚಂದ್ರ, ಕೆ.ಎಸ್. ನಂಜುಂಡಗೌಡ ಇದ್ದರು.