<p>ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರಿನ ದ್ರೌಪತಮ್ಮ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವವು ಶನಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.</p>.<p>ಕರಗದ ಪೂಜಾರಿ ಅಭಿಲಾಷ್ ಅವರು ಹೂವಿನ ಕರಗ ಹೊತ್ತು ಮೇಲೂರು ಗ್ರಾಮದ ಪ್ರಮುಖ ವೃತ್ತಗಳಲ್ಲಿ, ತಮಟೆ ವಾದಗಳು ಮಂಗಳವಾದ್ಯಗಳ ವಾದನಗಳಿಗೆ ತಕ್ಕಂತೆ ನರ್ತಿಸಿ, ಭಕ್ತರನ್ನು ರಂಜಿಸಿದರು.</p>.<p>ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ವಾದ್ಯಗೋಷ್ಠಿ ಏರ್ಪಡಿಸಲಾಗಿತ್ತು. ಕರಗ ಮಹೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ವಹ್ನಿಕುಲ ಕ್ಷತ್ರಿಯ ತಿಗಳ ಸಮುದಾಯದ ವೀರಕುಮಾರರು, ಗೋವಿಂದ... ಗೋವಿಂದ.. ಜಯಘೋಷದೊಂದಿಗೆ ಕರಗ ಹಿಂಬಾಲಿಸಿ, ಡೀ.. ಡಿಕ್...ಎಂದು ಕತ್ತಿಗಳ ಮೂಲಕ ಆಲಗು ಸೇವೆ ಸಮರ್ಪಣೆ ಮಾಡಿದರು.</p>.<p>ಮೇಲೂರು ಸೇರಿದಂತೆ ಮಳ್ಳೂರು, ಮುತ್ತೂರು, ಗಂಗನಹಳ್ಳಿ ಅಪ್ಪೇಗೌಡನಹಳ್ಳಿ, ಕಂಬದಹಳ್ಳಿ, ಚೌಡಸಂದ್ರ, ಬೆಳ್ಳೂಟಿ, ಭಕ್ತರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಮಂದಿ ಕರಗ ವೀಕ್ಷಣೆಗೆ ಬಂದಿದ್ದರು. ಕರಗ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-16-1945557952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರಿನ ದ್ರೌಪತಮ್ಮ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವವು ಶನಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.</p>.<p>ಕರಗದ ಪೂಜಾರಿ ಅಭಿಲಾಷ್ ಅವರು ಹೂವಿನ ಕರಗ ಹೊತ್ತು ಮೇಲೂರು ಗ್ರಾಮದ ಪ್ರಮುಖ ವೃತ್ತಗಳಲ್ಲಿ, ತಮಟೆ ವಾದಗಳು ಮಂಗಳವಾದ್ಯಗಳ ವಾದನಗಳಿಗೆ ತಕ್ಕಂತೆ ನರ್ತಿಸಿ, ಭಕ್ತರನ್ನು ರಂಜಿಸಿದರು.</p>.<p>ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ವಾದ್ಯಗೋಷ್ಠಿ ಏರ್ಪಡಿಸಲಾಗಿತ್ತು. ಕರಗ ಮಹೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ವಹ್ನಿಕುಲ ಕ್ಷತ್ರಿಯ ತಿಗಳ ಸಮುದಾಯದ ವೀರಕುಮಾರರು, ಗೋವಿಂದ... ಗೋವಿಂದ.. ಜಯಘೋಷದೊಂದಿಗೆ ಕರಗ ಹಿಂಬಾಲಿಸಿ, ಡೀ.. ಡಿಕ್...ಎಂದು ಕತ್ತಿಗಳ ಮೂಲಕ ಆಲಗು ಸೇವೆ ಸಮರ್ಪಣೆ ಮಾಡಿದರು.</p>.<p>ಮೇಲೂರು ಸೇರಿದಂತೆ ಮಳ್ಳೂರು, ಮುತ್ತೂರು, ಗಂಗನಹಳ್ಳಿ ಅಪ್ಪೇಗೌಡನಹಳ್ಳಿ, ಕಂಬದಹಳ್ಳಿ, ಚೌಡಸಂದ್ರ, ಬೆಳ್ಳೂಟಿ, ಭಕ್ತರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಮಂದಿ ಕರಗ ವೀಕ್ಷಣೆಗೆ ಬಂದಿದ್ದರು. ಕರಗ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-16-1945557952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>