ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಸಮಾಧಿಗೆ ಅನೇಕ ಗಣ್ಯರು, ಮುಖಂಡರು, ವಿದ್ಯಾರ್ಥಿಗಳು, ನಾಗರಿಕರು ಗೌರವ ಸಲ್ಲಿಸಿದರು. ಪ್ರತಿ ವರ್ಷ ನಗರದ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ ವಿದ್ಯಾ ಸಂಸ್ಥೆ ವತಿಯಿಂದ ನಗರದಲ್ಲಿ ವಿಶ್ವೇಶ್ವರಯ್ಯ ಅವರ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಕಾರಣಕ್ಕೆ ಮೆರವಣಿಗೆ ನಡೆಸಲಿಲ್ಲ.