<p><strong>ಚಿಕ್ಕಬಳ್ಳಾಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂಯು) ಗುರುವಾರ ನೀಡಿದ್ದ ಕರೆ ಬೆಂಬಲಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ‘ಎಲ್ಲಾ ಕೂಲಿಕಾರರ ಕುಟುಂಬಗಳಿಗೆ ತಿಂಗಳಿಗೆ ₹7,500 ರಂತೆ ಕನಿಷ್ಠ ಮೂರು ತಿಂಗಳು ಆರ್ಥಿಕ ನೆರವು ನೀಡಬೇಕು. ವಲಸೆ ಕಾರ್ಮಿಕ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಅಪಘಾತ, ಹಸಿವಿನಿಂದ ಸತ್ತವರು ಮತ್ತು ಆತ್ಮಹತ್ಯೆ ಮಾಡಿಕೊಂಡ ವಲಸೆ ಕಾರ್ಮಿಕರ ಅವಲಂಬಿತರಿಗೆ ಗರಿಷ್ಠ ಪರಿಹಾರ ನೀಡಬೇಕು. ದಿನವೊಂದಕ್ಕೆ ₹600 ವರ್ಷದಲ್ಲಿ 200 ದಿನಗಳ ಉದ್ಯೋಗ ಖಾತ್ರಿ ಕೆಲಸ ಕೊಡಬೇಕು’ ಎಂದು ಹೇಳಿದರು.</p>.<p>‘ಪ್ರತಿ ಕೂಲಿಕಾರ ಕುಟುಂಬಕ್ಕೆ ಮುಂದಿನ ಆರು ತಿಂಗಳು ತಲಾ 10 ಕೆ.ಜಿ ಅಕ್ಕಿ ಮತ್ತು ಇತರೆ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಬೇಕು. ಎಲ್ಲಾ ನಾಗರಿಕರ, ಮುಖ್ಯವಾಗಿ ಗ್ರಾಮೀಣ ಜನತೆಯ ಆರೋಗ್ಯ ತಪಾಸಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು’ ಎಂದು ತಿಳಿಸಿದರು.</p>.<p>‘ಕಾರ್ಮಿಕ ಕಾಯ್ದೆಗಳನ್ನು ಕಿತ್ತು ಹಾಕಿದ್ದನ್ನು ಮರಳಿ ಜಾರಿ ಮಾಡಬೇಕು. ಸಾರ್ವಜನಿಕ ವಲಯದ ಘಟಕಗಳ ಬಂಡವಾಳ ಹಿಂಪಡೆತ ನಿಲ್ಲಿಸಬೇಕು. ವಿವಿಧ ರಂಗಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಕೈ ಬಿಡಬೇಕು’ ಎಂದರು.</p>.<p>‘2018 ರ ಮಾದರಿ ಗುತ್ತಿಗೆ ಕೃಷಿ ಕಾಯ್ದೆಯನ್ನು, ಮಾದರಿ ಭೂಗೇಣಿ ಕಾಯ್ದೆಯನ್ನು, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೈ ಬಿಡಬೇಕು, ಸರ್ಕಾರಿ ಭೂಮಿಯನ್ನು ಮತ್ತು ಹೆಚ್ಚುವರಿ ಭೂಮಿಯನ್ನು ಭೂರಹಿತ ಕೃಷಿ ಕೂಲಿಕಾರರಿಗೆ, ದಲಿತರಿಗೆ ವಿತರಣೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಬಿ.ಎನ್.ಮುನಿಕೃಷ್ಣಪ್ಪ, ಕೆ.ಆರ್.ಮಂಜುಳಾ, ರತ್ನಮ್ಮ, ಮುನಿಯಪ್ಪ, ಬಸವರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂಯು) ಗುರುವಾರ ನೀಡಿದ್ದ ಕರೆ ಬೆಂಬಲಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ‘ಎಲ್ಲಾ ಕೂಲಿಕಾರರ ಕುಟುಂಬಗಳಿಗೆ ತಿಂಗಳಿಗೆ ₹7,500 ರಂತೆ ಕನಿಷ್ಠ ಮೂರು ತಿಂಗಳು ಆರ್ಥಿಕ ನೆರವು ನೀಡಬೇಕು. ವಲಸೆ ಕಾರ್ಮಿಕ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಅಪಘಾತ, ಹಸಿವಿನಿಂದ ಸತ್ತವರು ಮತ್ತು ಆತ್ಮಹತ್ಯೆ ಮಾಡಿಕೊಂಡ ವಲಸೆ ಕಾರ್ಮಿಕರ ಅವಲಂಬಿತರಿಗೆ ಗರಿಷ್ಠ ಪರಿಹಾರ ನೀಡಬೇಕು. ದಿನವೊಂದಕ್ಕೆ ₹600 ವರ್ಷದಲ್ಲಿ 200 ದಿನಗಳ ಉದ್ಯೋಗ ಖಾತ್ರಿ ಕೆಲಸ ಕೊಡಬೇಕು’ ಎಂದು ಹೇಳಿದರು.</p>.<p>‘ಪ್ರತಿ ಕೂಲಿಕಾರ ಕುಟುಂಬಕ್ಕೆ ಮುಂದಿನ ಆರು ತಿಂಗಳು ತಲಾ 10 ಕೆ.ಜಿ ಅಕ್ಕಿ ಮತ್ತು ಇತರೆ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಬೇಕು. ಎಲ್ಲಾ ನಾಗರಿಕರ, ಮುಖ್ಯವಾಗಿ ಗ್ರಾಮೀಣ ಜನತೆಯ ಆರೋಗ್ಯ ತಪಾಸಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು’ ಎಂದು ತಿಳಿಸಿದರು.</p>.<p>‘ಕಾರ್ಮಿಕ ಕಾಯ್ದೆಗಳನ್ನು ಕಿತ್ತು ಹಾಕಿದ್ದನ್ನು ಮರಳಿ ಜಾರಿ ಮಾಡಬೇಕು. ಸಾರ್ವಜನಿಕ ವಲಯದ ಘಟಕಗಳ ಬಂಡವಾಳ ಹಿಂಪಡೆತ ನಿಲ್ಲಿಸಬೇಕು. ವಿವಿಧ ರಂಗಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಕೈ ಬಿಡಬೇಕು’ ಎಂದರು.</p>.<p>‘2018 ರ ಮಾದರಿ ಗುತ್ತಿಗೆ ಕೃಷಿ ಕಾಯ್ದೆಯನ್ನು, ಮಾದರಿ ಭೂಗೇಣಿ ಕಾಯ್ದೆಯನ್ನು, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೈ ಬಿಡಬೇಕು, ಸರ್ಕಾರಿ ಭೂಮಿಯನ್ನು ಮತ್ತು ಹೆಚ್ಚುವರಿ ಭೂಮಿಯನ್ನು ಭೂರಹಿತ ಕೃಷಿ ಕೂಲಿಕಾರರಿಗೆ, ದಲಿತರಿಗೆ ವಿತರಣೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಬಿ.ಎನ್.ಮುನಿಕೃಷ್ಣಪ್ಪ, ಕೆ.ಆರ್.ಮಂಜುಳಾ, ರತ್ನಮ್ಮ, ಮುನಿಯಪ್ಪ, ಬಸವರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>