<p><strong>ಚಿಕ್ಕಬಳ್ಳಾಪುರ</strong>: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಕಾಯಂಗೊಳಿಸುವಂತೆ ಒತ್ತಾಯಿಸಿ ಬಿಸಿಯೂಟ ನೌಕರರು ದೇಶದಾದ್ಯಂತ ಜು.9ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. </p>.<p>ಈ ಪ್ರಯುಕ್ತ ನಗರದ ಸಿಪಿಎಂ ಕಚೇರಿಯಲ್ಲಿ ಬಿಸಿಯೂಟ ನೌಕರರ ಸಭೆ ಶನಿವಾರ ನಡೆಯಿತು.</p>.<p>ಬದುಕನ್ನು ಉಳಿಸುವ ಸಂಘದ ಮುಷ್ಕರದ ಹಕ್ಕು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಮತ್ತು ಬಿಸಿಯೂಟ ನೌಕರರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಬಿಸಿಯೂಟ ಸಿಬ್ಬಂದಿ ಈ ಮುಷ್ಕರಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಕೋರಿದರು.</p>.<p>ಬಿಸಿಯೂಟದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ನೌಕರರು ಶ್ರಮಿಸುತ್ತಿದ್ದಾರೆ. ಬಿಸಿಯೂಟ ನೌಕರರನ್ನು ಕಾರ್ಮಿಕರು ಎಂದು ಪರಿಗಣಿಸಿ ಪಿಂಚಣಿ ಸೇರಿದಂತೆ ಶಾಸನ ಬದ್ಧ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಖಜಾಂಚಿ ಭಾರತಿ, ಕಾಂತ, ಚನ್ನಮ್ಮ, ಅರುಣಾ, ವನಜಾಕ್ಷಿ, ಉಮಾ, ಆಶಾ, ನಾಮಗಣಿ, ಅಶ್ವತ್ಥಮ್ಮ, ಶಶಿಕಲಾ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಕಾಯಂಗೊಳಿಸುವಂತೆ ಒತ್ತಾಯಿಸಿ ಬಿಸಿಯೂಟ ನೌಕರರು ದೇಶದಾದ್ಯಂತ ಜು.9ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. </p>.<p>ಈ ಪ್ರಯುಕ್ತ ನಗರದ ಸಿಪಿಎಂ ಕಚೇರಿಯಲ್ಲಿ ಬಿಸಿಯೂಟ ನೌಕರರ ಸಭೆ ಶನಿವಾರ ನಡೆಯಿತು.</p>.<p>ಬದುಕನ್ನು ಉಳಿಸುವ ಸಂಘದ ಮುಷ್ಕರದ ಹಕ್ಕು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಮತ್ತು ಬಿಸಿಯೂಟ ನೌಕರರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಬಿಸಿಯೂಟ ಸಿಬ್ಬಂದಿ ಈ ಮುಷ್ಕರಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಕೋರಿದರು.</p>.<p>ಬಿಸಿಯೂಟದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ನೌಕರರು ಶ್ರಮಿಸುತ್ತಿದ್ದಾರೆ. ಬಿಸಿಯೂಟ ನೌಕರರನ್ನು ಕಾರ್ಮಿಕರು ಎಂದು ಪರಿಗಣಿಸಿ ಪಿಂಚಣಿ ಸೇರಿದಂತೆ ಶಾಸನ ಬದ್ಧ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಖಜಾಂಚಿ ಭಾರತಿ, ಕಾಂತ, ಚನ್ನಮ್ಮ, ಅರುಣಾ, ವನಜಾಕ್ಷಿ, ಉಮಾ, ಆಶಾ, ನಾಮಗಣಿ, ಅಶ್ವತ್ಥಮ್ಮ, ಶಶಿಕಲಾ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>