<p><strong>ಚಿಕ್ಕಬಳ್ಳಾಪುರ</strong>: ಕೋವಿಡ್ನ ಮೊದಲ ಮತ್ತು ಎರಡನೇ ಅಲೆಯಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ₹ 1 ಲಕ್ಷ ಪರಿಹಾರ ನೀಡಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಮಾತ್ರ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ಮೂಲಕ ಈ ನೆರವುನೀಡಲಾಗುತ್ತಿದೆ.</p>.<p>ಕಳೆದ ವರ್ಷದ ಲಾಕ್ಡೌನ್ ವೇಳೆಯೂ ಜನರಿಗೆ ನೆರವು ನೀಡಲಾಗಿತ್ತು. ಇಂದಿಗೂ ಹಳ್ಳಿಗಳಲ್ಲಿ ಬಡತನವಿದೆ. ಈ ಸಂದರ್ಭದಲ್ಲಿ ಅವರ ಜತೆ ನಿಂತುಕೊಳ್ಳುವುದು ನಮ್ಮ ಕರ್ತವ್ಯ. ನಾನು ಮತ್ತು ನಮ್ಮ ಎಲ್ಲ ಮುಖಂಡರು ಅವರಿಗೆ ಸಹಕಾರ ನೀಡುತ್ತೇವೆ. ಉಚಿತವಾಗಿ ಪ್ರತಿ ಮನೆಗೂ ಒಂದು ತಿಂಗಳಿಗೆ ಆಗುವಷ್ಟು ಆಹಾರ ಸಾಮಗ್ರಿಗಳನ್ನು ಕಳೆದ ವರ್ಷವೂ ನೀಡಿದ್ದೇವೆ. ಈ ವರ್ಷ ಸಹ ಲಾಕ್ಡೌನ್ ಆಗಿರುವುದರಿಂದ ಆಹಾರದ ಕಿಟ್ ಕೊಡುತ್ತಿದ್ದೇವೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ದುರದೃಷ್ಟದಿಂದ ಕೋವಿಡ್ನಿಂದ ಸಾವುಗಳಾಗಿವೆ. ಕೆಲವು ಸಚಿವ ಮಿತ್ರರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ನೆರವು ನೀಡುತ್ತಿದ್ದಾರೆ. ಆ ಪ್ರಕಾರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳ ಜತೆ ನಾವು ಇದ್ದೇವೆ. ಅವರ ಮನೆಗಳಿಗೆ ತೆರಳಿ ಸಾಂತ್ವನ ಸಹ ಹೇಳಲಾಗುತ್ತಿದೆ. ಜತೆಗೆ ₹ 1 ಲಕ್ಷ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.</p>.<p>ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ವರ್ಷ 75 ಸಾವಿರ ಆಹಾರದ ಕಿಟ್ಗಳನ್ನು ಜನರಿಗೆ ನೀಡಿದ್ದೆವು. ಈ ಬಾರಿ ಕ್ಷೇತ್ರದಲ್ಲಿ 76 ಸಾವಿರ ಆಹಾರ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಮಂಚೇನಹಳ್ಳಿ ಹೋಬಳಿ ವ್ಯಾಪ್ತಿಯ ಮಿನಕನಗುರ್ಕಿ, ಜರಬಂಡಹಳ್ಳಿ, ಗೌಡಗೆರೆ, ಹೊನ್ನಪ್ಪನಹಳ್ಳಿ ಮತ್ತಿತರರ ಗ್ರಾಮಗಳಲ್ಲಿನ ಬಡವರು ಮತ್ತು ನಿರ್ಗತಿಕರಿಗೆ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ನಿಂದ ಸಚಿವರು ಆಹಾರದ ಕಿಟ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಕೋವಿಡ್ನ ಮೊದಲ ಮತ್ತು ಎರಡನೇ ಅಲೆಯಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ₹ 1 ಲಕ್ಷ ಪರಿಹಾರ ನೀಡಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಮಾತ್ರ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ಮೂಲಕ ಈ ನೆರವುನೀಡಲಾಗುತ್ತಿದೆ.</p>.<p>ಕಳೆದ ವರ್ಷದ ಲಾಕ್ಡೌನ್ ವೇಳೆಯೂ ಜನರಿಗೆ ನೆರವು ನೀಡಲಾಗಿತ್ತು. ಇಂದಿಗೂ ಹಳ್ಳಿಗಳಲ್ಲಿ ಬಡತನವಿದೆ. ಈ ಸಂದರ್ಭದಲ್ಲಿ ಅವರ ಜತೆ ನಿಂತುಕೊಳ್ಳುವುದು ನಮ್ಮ ಕರ್ತವ್ಯ. ನಾನು ಮತ್ತು ನಮ್ಮ ಎಲ್ಲ ಮುಖಂಡರು ಅವರಿಗೆ ಸಹಕಾರ ನೀಡುತ್ತೇವೆ. ಉಚಿತವಾಗಿ ಪ್ರತಿ ಮನೆಗೂ ಒಂದು ತಿಂಗಳಿಗೆ ಆಗುವಷ್ಟು ಆಹಾರ ಸಾಮಗ್ರಿಗಳನ್ನು ಕಳೆದ ವರ್ಷವೂ ನೀಡಿದ್ದೇವೆ. ಈ ವರ್ಷ ಸಹ ಲಾಕ್ಡೌನ್ ಆಗಿರುವುದರಿಂದ ಆಹಾರದ ಕಿಟ್ ಕೊಡುತ್ತಿದ್ದೇವೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ದುರದೃಷ್ಟದಿಂದ ಕೋವಿಡ್ನಿಂದ ಸಾವುಗಳಾಗಿವೆ. ಕೆಲವು ಸಚಿವ ಮಿತ್ರರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ನೆರವು ನೀಡುತ್ತಿದ್ದಾರೆ. ಆ ಪ್ರಕಾರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳ ಜತೆ ನಾವು ಇದ್ದೇವೆ. ಅವರ ಮನೆಗಳಿಗೆ ತೆರಳಿ ಸಾಂತ್ವನ ಸಹ ಹೇಳಲಾಗುತ್ತಿದೆ. ಜತೆಗೆ ₹ 1 ಲಕ್ಷ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.</p>.<p>ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ವರ್ಷ 75 ಸಾವಿರ ಆಹಾರದ ಕಿಟ್ಗಳನ್ನು ಜನರಿಗೆ ನೀಡಿದ್ದೆವು. ಈ ಬಾರಿ ಕ್ಷೇತ್ರದಲ್ಲಿ 76 ಸಾವಿರ ಆಹಾರ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಮಂಚೇನಹಳ್ಳಿ ಹೋಬಳಿ ವ್ಯಾಪ್ತಿಯ ಮಿನಕನಗುರ್ಕಿ, ಜರಬಂಡಹಳ್ಳಿ, ಗೌಡಗೆರೆ, ಹೊನ್ನಪ್ಪನಹಳ್ಳಿ ಮತ್ತಿತರರ ಗ್ರಾಮಗಳಲ್ಲಿನ ಬಡವರು ಮತ್ತು ನಿರ್ಗತಿಕರಿಗೆ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ನಿಂದ ಸಚಿವರು ಆಹಾರದ ಕಿಟ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>