ಮತ್ತಷ್ಟು ಸಚಿವರು ನ್ಯಾಯಾಲಯದ ಮೊರೆ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮತ್ತಷ್ಟು ಸಚಿವರು ಇಂಜಕ್ಷನ್ ಕೋರಿ ನ್ಯಾಯಾಲಯದ ಮೊರ ಹೋಗುವರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾವು ಬಿಜೆಪಿಯ ಪ್ರಮುಖರ ಗಮನಕ್ಕೆ ತಂದೆಯೇ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದರು.
ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಪಕ್ಷಕ್ಕೆ ಮುಜುಗರ ತರುವ ವಿಷಯ ಎಂದಿರುವ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮಾಹಿತಿಯ ಕೊರತೆ ಇದೆ ಎಂದು ಹೇಳಿದರು.
ಇವನ್ನೂ ಓದಿ...
ಹಲವರಿಗೆ ನಾವು ಮೈತ್ರಿ ಸರ್ಕಾರ ಕೆಡವಿದ್ದೇವೆ ಎಂಬ ಕೋಪ ಇದೆ: ಎಸ್.ಟಿ.ಸೋಮಶೇಖರ್
ರಾಜಕೀಯ ಷಡ್ಯಂತ್ರ ಆರಂಭ: ತೇಜೋವಧೆ ಮಾಡುವ ಯತ್ನವಿದು –ಸುಧಾಕರ್
ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.