<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಲಾಕ್ಡೌನ್ ಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ನಿರ್ಗತಿಕರು, ಬಡ ಕಾರ್ಮಿಕರು, ಹಾಗೂ ಬಿಪಿಎಲ್ ಪಡಿತರದಾರರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.</p>.<p>ಈ ಕಾರ್ಯಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಸುಧಾಕರ್ ಅವರು, ‘ಕ್ಷೇತ್ರದಾದ್ಯಂತ ಸುಮಾರು 50 ಸಾವಿರ ಕುಟುಂಬಗಳಿಗೆ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ಕಾರದಪುಡಿ, ಸಾಂಬಾರ್ ಪುಡಿ, ದನಿಯಾ ಪುಡಿ, ಹುಣಸೆ ಹಣ್ಣು ಇನ್ನಿತರ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಲಾಕ್ಡೌನ್ ಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ನಿರ್ಗತಿಕರು, ಬಡ ಕಾರ್ಮಿಕರು, ಹಾಗೂ ಬಿಪಿಎಲ್ ಪಡಿತರದಾರರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.</p>.<p>ಈ ಕಾರ್ಯಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಸುಧಾಕರ್ ಅವರು, ‘ಕ್ಷೇತ್ರದಾದ್ಯಂತ ಸುಮಾರು 50 ಸಾವಿರ ಕುಟುಂಬಗಳಿಗೆ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ಕಾರದಪುಡಿ, ಸಾಂಬಾರ್ ಪುಡಿ, ದನಿಯಾ ಪುಡಿ, ಹುಣಸೆ ಹಣ್ಣು ಇನ್ನಿತರ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>