<p><strong>ಚಿಂತಾಮಣಿ:</strong> ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲಾಧಿಕಾರಿ ಜಿ.ಪ್ರಭು ಅವರೊಂದಿಗೆ ಸೋಮವಾರ ನಗರದ ಅಜಾದ್ ಚೌಕದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದರು.</p>.<p>ಜನರ ಉಪಯೋಗಕ್ಕಾಗಿ ದೂರದೃಷ್ಟಿಯಿಂದ ನಗರದ ಎಂ.ಜಿ.ರಸ್ತೆಯಿಂದ ರೈಲ್ವೆ ನಿಲ್ದಾಣ ರಸ್ತೆ ವಿಸ್ತರಣೆ. ಬಂಬೂ ಬಜಾರ್ ರಸ್ತೆ, ರಾಮಕುಂಟೆಯಿಂದ ಬರುವ ರಸ್ತೆಗಳ ಪರಿಶೀಲನೆ ನಡೆಸಿ ಅಗಲೀಕರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ವರದಿ ಸಲ್ಲಿಸಲು ಸೂಚಿಸಿದರು.</p>.<p>ರೈಲ್ವೆ ನಿಲ್ದಾಣಕ್ಕೆ ಸಂಚರಿಸುವ ಜನಸಂಖ್ಯೆ ಹೆಚ್ಚಾಗಿದೆ. ಭವಿಷ್ಯದಲ್ಲಿ ರೈಲುಗಳ ಓಡಾಟದ ಸಂಖ್ಯೆ ಹೆಚ್ಚಾಗುತ್ತದೆ. ಗೂಡ್ಸ್ ರೈಲುಗಳು ಸಂಚರಿಸಲಿವೆ. ಆದರೆ, ರೈಲ್ವೆ ನಿಲ್ದಾಣಕ್ಕೆ ಹೋಗಿಬರಲು ರಸ್ತೆ ತುಂಬಾ ಕಿರಿದಾಗಿದೆ. 12-13 ವರ್ಷಗಳ ಹಿಂದೆಯೇ ರೈಲ್ವೆ ನಿಲ್ದಾಣಕ್ಕೆ ನೇರ ರಸ್ತೆಯ ಚಿಂತನೆ ನಡೆಸಿದ್ದೆ. ಅಂದಿನ ಜಿಲ್ಲಾಧಿಕಾರಿ ಎನ್.ಮಂಜುಳಾ ಅವರನ್ನು ಕರೆದುಕೊಂಡು ಬಂದು ವೀಕ್ಷಣೆ ಮಾಡಿಸಿ, ಸೂಕ್ತ ಕ್ರಮಕೈಗೊಳ್ಳಲು ಮನವಿ ಮಾಡಿದ್ದೆ ಎಂದು ಹೇಳಿದರು.</p>.<p>ಯೋಜನೆ ಕಾರ್ಯರೂಪಕ್ಕೆ ಬರದೆ ಕಳೆದ 10 ವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಈಗ ನಗರೋತ್ಥಾನ ಯೋಜನೆಯಲ್ಲಿ ಅನುದಾನವನ್ನು ನೀಡಲಾಗಿದೆ. ಪರ್ಯಾಯ ರಸ್ತೆಯನ್ನು ಮಾಡಲು ಈ ಭಾಗದ ರೈತರೊಂದಿಗೂ ಚರ್ಚೆ ಮಾಡಲಾಗಿದೆ. ಅವರು ಸಹ ಸಮ್ಮತಿಸಿದ್ದಾರೆ. ಈ ಭಾಗದಲ್ಲಿ ರೈತರಿಗೂ ಸೂಕ್ತ ರಸ್ತೆ ವ್ಯವಸ್ಥೆಯಿಲ್ಲ. ರಸ್ತೆಯಾದರೆ ಹೆಚ್ಚು ಅಭಿವೃದ್ಧಿಯಾಗಿ ಅವರ ಜಮೀನುಗಳ ಬೆಲೆಯೂ ಜಾಸ್ತಿಯಾಗಲಿದೆ ಎಂದರು.</p>.<p>ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳು ಚರ್ಚೆ ನಡೆಸಿ ವರದಿ ತಯಾರಿಸಿದ ನಂತರ ಸಾರ್ವಜನಿಕರ ಗಮನಕ್ಕೂ ತರಲಾಗುವುದು. ನಗರದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಜಿ.ಪ್ರಭು, ತಹಶೀಲ್ದಾರ್ ಸುದರ್ಶನ ಯಾದವ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪೌರಾಯುಕ್ತ ಜಿ.ಎನ್.ಚಲಪತಿ ಮತ್ತಿತರ ಅಧಿಕಾರಿಗಳು, ಎಂಜನಿಯರ್ಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲಾಧಿಕಾರಿ ಜಿ.ಪ್ರಭು ಅವರೊಂದಿಗೆ ಸೋಮವಾರ ನಗರದ ಅಜಾದ್ ಚೌಕದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದರು.</p>.<p>ಜನರ ಉಪಯೋಗಕ್ಕಾಗಿ ದೂರದೃಷ್ಟಿಯಿಂದ ನಗರದ ಎಂ.ಜಿ.ರಸ್ತೆಯಿಂದ ರೈಲ್ವೆ ನಿಲ್ದಾಣ ರಸ್ತೆ ವಿಸ್ತರಣೆ. ಬಂಬೂ ಬಜಾರ್ ರಸ್ತೆ, ರಾಮಕುಂಟೆಯಿಂದ ಬರುವ ರಸ್ತೆಗಳ ಪರಿಶೀಲನೆ ನಡೆಸಿ ಅಗಲೀಕರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ವರದಿ ಸಲ್ಲಿಸಲು ಸೂಚಿಸಿದರು.</p>.<p>ರೈಲ್ವೆ ನಿಲ್ದಾಣಕ್ಕೆ ಸಂಚರಿಸುವ ಜನಸಂಖ್ಯೆ ಹೆಚ್ಚಾಗಿದೆ. ಭವಿಷ್ಯದಲ್ಲಿ ರೈಲುಗಳ ಓಡಾಟದ ಸಂಖ್ಯೆ ಹೆಚ್ಚಾಗುತ್ತದೆ. ಗೂಡ್ಸ್ ರೈಲುಗಳು ಸಂಚರಿಸಲಿವೆ. ಆದರೆ, ರೈಲ್ವೆ ನಿಲ್ದಾಣಕ್ಕೆ ಹೋಗಿಬರಲು ರಸ್ತೆ ತುಂಬಾ ಕಿರಿದಾಗಿದೆ. 12-13 ವರ್ಷಗಳ ಹಿಂದೆಯೇ ರೈಲ್ವೆ ನಿಲ್ದಾಣಕ್ಕೆ ನೇರ ರಸ್ತೆಯ ಚಿಂತನೆ ನಡೆಸಿದ್ದೆ. ಅಂದಿನ ಜಿಲ್ಲಾಧಿಕಾರಿ ಎನ್.ಮಂಜುಳಾ ಅವರನ್ನು ಕರೆದುಕೊಂಡು ಬಂದು ವೀಕ್ಷಣೆ ಮಾಡಿಸಿ, ಸೂಕ್ತ ಕ್ರಮಕೈಗೊಳ್ಳಲು ಮನವಿ ಮಾಡಿದ್ದೆ ಎಂದು ಹೇಳಿದರು.</p>.<p>ಯೋಜನೆ ಕಾರ್ಯರೂಪಕ್ಕೆ ಬರದೆ ಕಳೆದ 10 ವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಈಗ ನಗರೋತ್ಥಾನ ಯೋಜನೆಯಲ್ಲಿ ಅನುದಾನವನ್ನು ನೀಡಲಾಗಿದೆ. ಪರ್ಯಾಯ ರಸ್ತೆಯನ್ನು ಮಾಡಲು ಈ ಭಾಗದ ರೈತರೊಂದಿಗೂ ಚರ್ಚೆ ಮಾಡಲಾಗಿದೆ. ಅವರು ಸಹ ಸಮ್ಮತಿಸಿದ್ದಾರೆ. ಈ ಭಾಗದಲ್ಲಿ ರೈತರಿಗೂ ಸೂಕ್ತ ರಸ್ತೆ ವ್ಯವಸ್ಥೆಯಿಲ್ಲ. ರಸ್ತೆಯಾದರೆ ಹೆಚ್ಚು ಅಭಿವೃದ್ಧಿಯಾಗಿ ಅವರ ಜಮೀನುಗಳ ಬೆಲೆಯೂ ಜಾಸ್ತಿಯಾಗಲಿದೆ ಎಂದರು.</p>.<p>ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳು ಚರ್ಚೆ ನಡೆಸಿ ವರದಿ ತಯಾರಿಸಿದ ನಂತರ ಸಾರ್ವಜನಿಕರ ಗಮನಕ್ಕೂ ತರಲಾಗುವುದು. ನಗರದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಜಿ.ಪ್ರಭು, ತಹಶೀಲ್ದಾರ್ ಸುದರ್ಶನ ಯಾದವ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪೌರಾಯುಕ್ತ ಜಿ.ಎನ್.ಚಲಪತಿ ಮತ್ತಿತರ ಅಧಿಕಾರಿಗಳು, ಎಂಜನಿಯರ್ಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>