ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ಮಾಡುವ ಮೂಲಕ ಯೋಗದಿನಕ್ಕೆ ಚಾಲನೆ ನೀಡಿದ ಸಚಿವ ಎಂ.ಟಿ.ಬಿ ನಾಗರಾಜ್ 

Last Updated 21 ಜೂನ್ 2022, 3:04 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಇತಿಹಾಸಿಕ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಯೋಗ ಮಾಡುವ ಮೂಲಕ ಯೋಗ ದಿನಕ್ಕೆ ಚಾಲನೆ ನೀಡಿದರು‌.

ಜಿಲ್ಲಾಧಿಕಾರಿ ಆರ್.ಲತಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ, ಯೋಗಾ ತರಬೇತುದಾರ ಗೋವಿಂದ್, ಪತಂಜಲಿ ಯೋಗ ಸಂಸ್ಥೆ ಚಿಕ್ಕಬಳ್ಳಾಪುರ, ಮುದ್ದೇನಹಳ್ಳಿ ಸರ್ಕಾರಿ ಪ್ರೌಢಶಾಲೆ, ನಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಸಿದ್ಧಾರ್ಥ ಪ್ರೌಢಶಾಲೆಯ ವಿದ್ಯಾರ್ಥಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಭೋಗನಂದೀಶ್ವರ ದೇವಸ್ಥಾನದ ಆವರಣ, ಗೌರಿಬಿದನೂರು ತಾಲ್ಲೂಕಿನ ವಿದಯರಾಶ್ವತ್ಥ ಹಾಗೂ ಚಿಂತಾಮಣಿ ತಾಲ್ಲೂಕಿನ ಕೈವಾರದ ಯೋಗಿ ನಾರೇಯಣ ಕ್ಷೇತ್ರದ ಆವರಣದಲ್ಲಿ ಏಕಕಾಲಕ್ಕೆ ಸಾಮೂಹಿಕ ಯೋಗ ಪ್ರದರ್ಶನ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT