<p><strong>ಚಿಂತಾಮಣಿ:</strong> ಮಳೆಯ ಕೊರತೆ ನೀಗಿಸಲು ಮರಗಿಡ ಬೆಳೆಸಬೇಕು ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ಸಲಹೆ ನೀಡಿದರು.</p>.<p>ಅರಣ್ಯ ಇಲಾಖೆ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬರಗಾಲದ ಬವಣೆಯಿಂದ ಹೊರಬರಲು ಪರಿಸರ ಸಂರಕ್ಷಣೆಯೊಂದೆ ದಾರಿ ಎಂದರು.</p>.<p>ನಗರದ 7ನೇ ವಾರ್ಡ್ ಅಶ್ವಿನಿ ಬಡಾವಣೆಯಲ್ಲಿ ಸಾವಿರ ಹಾಗೂ ತಾಲ್ಲೂಕು ಕಚೇರಿ ಸುತ್ತಮುತ್ತ 50 ಗಿಡಗಳನ್ನು ನೆಡಲಾಯಿತು.</p>.<p>ತಹಶೀಲ್ದಾರ್ ಹನುಮಂತರಾಯಪ್ಪ, ವಲಯ ಅರಣ್ಯಾಧಿಕಾರಿಗಳಾದ ಟಿ.ಅಶ್ವತ್ಥಪ್ಪ, ಮಂಜುನಾಥ್, ಉಪವಲಯ ಅರಣ್ಯಾಧಿಕಾರಿಗಳಾದ ಜಯಚಂದ್ರ, ಜಿ.ಆರ್.ಶ್ರೀನಿವಾಸ್, ಸೋಮನಾಥ, ನಗರಸಭೆ ಪೌರಾಯುಕ್ತ ಹರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ನಗರಸಭೆ ಸದಸ್ಯರಾದ ಸಿ.ಕೆ. ಶಬ್ಬೀರ್, ಮಂಜುನಾಥ್, ಮಾಜಿ<br />ಸದಸ್ಯ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ<br />ಗುಡೇ ಶ್ರೀನಿವಾಸರೆಡ್ಡಿ ಭಾಗವಹಿಸಿದ್ದರು.</p>.<p class="Subhead">ಆರ್.ಕೆ.ವಿಜನ್ ಶಾಲೆ: ನಗರದ ಹೊರವಲಯದಲ್ಲಿರುವ ಆರ್.ಕೆ.ವಿಜನ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ‘ಜೀವವೈವಿದ್ಯವನ್ನು ಆಚರಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು. ತಹಶೀಲ್ದಾರ್ ಹನುಮಂತರಾಯಪ್ಪ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ಡಾ.ಜಿ.ವಿ.ಕೆ ರೆಡ್ಡಿ, ಪ್ರಾಂಶುಪಾಲ ಕೆ.ಪಿ.ನಾಗಾರ್ಜುನರೆಡ್ಡಿ,ಉಪನ್ಯಾಸಕ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಮಳೆಯ ಕೊರತೆ ನೀಗಿಸಲು ಮರಗಿಡ ಬೆಳೆಸಬೇಕು ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ಸಲಹೆ ನೀಡಿದರು.</p>.<p>ಅರಣ್ಯ ಇಲಾಖೆ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬರಗಾಲದ ಬವಣೆಯಿಂದ ಹೊರಬರಲು ಪರಿಸರ ಸಂರಕ್ಷಣೆಯೊಂದೆ ದಾರಿ ಎಂದರು.</p>.<p>ನಗರದ 7ನೇ ವಾರ್ಡ್ ಅಶ್ವಿನಿ ಬಡಾವಣೆಯಲ್ಲಿ ಸಾವಿರ ಹಾಗೂ ತಾಲ್ಲೂಕು ಕಚೇರಿ ಸುತ್ತಮುತ್ತ 50 ಗಿಡಗಳನ್ನು ನೆಡಲಾಯಿತು.</p>.<p>ತಹಶೀಲ್ದಾರ್ ಹನುಮಂತರಾಯಪ್ಪ, ವಲಯ ಅರಣ್ಯಾಧಿಕಾರಿಗಳಾದ ಟಿ.ಅಶ್ವತ್ಥಪ್ಪ, ಮಂಜುನಾಥ್, ಉಪವಲಯ ಅರಣ್ಯಾಧಿಕಾರಿಗಳಾದ ಜಯಚಂದ್ರ, ಜಿ.ಆರ್.ಶ್ರೀನಿವಾಸ್, ಸೋಮನಾಥ, ನಗರಸಭೆ ಪೌರಾಯುಕ್ತ ಹರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ನಗರಸಭೆ ಸದಸ್ಯರಾದ ಸಿ.ಕೆ. ಶಬ್ಬೀರ್, ಮಂಜುನಾಥ್, ಮಾಜಿ<br />ಸದಸ್ಯ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ<br />ಗುಡೇ ಶ್ರೀನಿವಾಸರೆಡ್ಡಿ ಭಾಗವಹಿಸಿದ್ದರು.</p>.<p class="Subhead">ಆರ್.ಕೆ.ವಿಜನ್ ಶಾಲೆ: ನಗರದ ಹೊರವಲಯದಲ್ಲಿರುವ ಆರ್.ಕೆ.ವಿಜನ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ‘ಜೀವವೈವಿದ್ಯವನ್ನು ಆಚರಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು. ತಹಶೀಲ್ದಾರ್ ಹನುಮಂತರಾಯಪ್ಪ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ಡಾ.ಜಿ.ವಿ.ಕೆ ರೆಡ್ಡಿ, ಪ್ರಾಂಶುಪಾಲ ಕೆ.ಪಿ.ನಾಗಾರ್ಜುನರೆಡ್ಡಿ,ಉಪನ್ಯಾಸಕ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>