ಎಸ್ಪಿ ಮಿಥುನ್ ಕುಮಾರ್ ಮಾತನಾಡಿ, ‘ಪೊಲೀಸ್ ಇಲಾಖೆಗೆ ವಾಹನಗಳ ಅಗತ್ಯ ಹೆಚ್ಚಾಗಿರುತ್ತದೆ. ತುರ್ತು ಕಾರ್ಯಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ತೊಡಗಿರುತ್ತಾರೆ. ಸುಸಜ್ಜಿತವಾದ ವಾಹನಗಳು ಅಗತ್ಯ. ಕೊರೊನಾ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ 50 ಚಾಲಕರಿಗೆ ಉಚಿತ ಸಮವಸ್ತ್ರ ನೀಡಲಾಗಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ನೂತನ ಕಟ್ಟಡವನ್ನು ನಿರ್ಮಿಸಿಕೊಡಬೇಕು’ ಎಂದು ಕೋರಿದರು.