ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಬಲಿದಾನದಿಂದ ಮೋದಿ ಪ್ರಧಾನಿ: ರಮೇಶ್‌ ಕುಮಾರ್‌

ಶಾಸಕ ರಮೇಶ್‌ ಕುಮಾರ್‌ ತಿರುಗೇಟು
Last Updated 3 ಡಿಸೆಂಬರ್ 2021, 16:33 IST
ಅಕ್ಷರ ಗಾತ್ರ

ಚಿಂತಾಮಣಿ (ಚಿಕ್ಕಬಳ್ಳಾಪುರ):‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೇಕಪ್ ಮಾಡಿಕೊಂಡು ದೂರದರ್ಶನದಲ್ಲಿ ಮಾತನಾಡುವ ಅವಕಾಶ ಹೇಗೆ ದೊರೆಯಿತು ಎಂದು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದುಶಾಸಕ ಕೆ.ಆರ್. ರಮೇಶ್‌ ಕುಮಾರ್ಶುಕ್ರವಾರ ಲೇವಡಿ ಮಾಡಿದ್ದಾರೆ.

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ಕಾಂಗ್ರೆಸ್ ಪಕ್ಷದ ತ್ಯಾಗ, ಬಲಿದಾನದಿಂದ ಇಂದು ಅವರು ಅಧಿಕಾರ ಅನುಭವಿಸುತ್ತಿದ್ದಾರೆ. ಧ್ವಜವನ್ನು ಹಿಡಿದು ಭಾರತ್ ಮಾತಾ ಕೀ ಜೈ ಎನ್ನುತ್ತಾರೆ. ಧ್ವಜವನ್ನು ಕೊಟ್ಟವರು ಯಾರು, ಮಾತಾಡುವ ಸ್ವಾತಂತ್ರ್ಯವನ್ನು ಕೊಟ್ಟವರು ಯಾರೆಂಬುದನ್ನು ಒಮ್ಮೆ ನೆನಪಿಸಿಕೊಳ್ಳಲಿ’ ಎಂದರು.

‘ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನೂ ಇಲ್ಲ ಎಂದು ಪ್ರಧಾನಿ ಮೋದಿ ಎಲ್ಲಾ ಕಡೆ ಹೇಳುತ್ತಾರೆ. ಕೋಟ್ಯಂತರ ಕಾರ್ಯಕರ್ತರು, ಮುಖಂಡರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದರಿಂದಲೇ ಬಿಜೆಪಿ ಇಂದು ಅಧಿಕಾರ ಅನುಭವಿಸುತ್ತಿದೆ. ಮೋದಿ ಪ್ರಧಾನಿ ಆಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಮಾತೆತ್ತಿದರೆ ಬಿಜೆಪಿಯವರು ನಾವು ರಾಮನ ಭಕ್ತರು,ರಾಮಮಂದಿರ ಎನ್ನುತ್ತಾರೆ. ನಾವೂ ರಾಮನ ಭಕ್ತರೇ. ರಾಮಮಂದಿರ ಕಟ್ಟಬೇಡಿ ಎಂದು ನಾವು ಎಂದೂ ಹೇಳಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT