ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕರ್ನಾಟಕದ ಕಾಯ್ದೆಯನ್ನು ರದ್ದು ಮಾಡಿ 2017ರ ಫೆಬ್ರುವರಿ 9ರಂದು ನೀಡಿದ ತೀರ್ಪನ್ನು ಯಾವುದೇ ರೀತಿಯಲ್ಲಿಯೂ ಪ್ರಶ್ನಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತತ್ಪರಿಣಾಮ ಜ್ಯೇಷ್ಠತೆಯ ಪ್ರಶ್ನೆಯನ್ನು ಆ ತೀರ್ಪಿನಲ್ಲಿಯೇ
ಪರಿಹರಿಸಲಾಗಿದೆ ಎಂದೂ ತಿಳಿಸಿದೆ.