ಚಿಕ್ಕಬಳ್ಳಾಪುರ: ವಿದುರಾಶ್ವತ್ಥದ ಹುತಾತ್ಮರ ಸ್ಮಾರಕ ಹಾಗೂ ವೀರಸೌಧದ ಬಳಿಯ ಮರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂಗಗಳಿದ್ದು ಇವುಗಳ ನಿಯಂತ್ರಣ ಅರಣ್ಯ ಇಲಾಖೆಗೆ ಸವಾಲಾಗಿದೆ.
ಈ ಎರಡು ಕಡೆಗಳಿಗೆ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸುವರು.
ಗಣ್ಯರು ಈ ಸ್ಥಳಕ್ಕೆ ಭೇಟಿ ನೀಡುವ ವೇಳೆ ಮಂಗಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.
ವ್ಯಕ್ತಿಯೊಬ್ಬರಿಗೆ ಮಂಗನ ವೇಷ ತೊಡಿಸಿ ಅವುಗಳನ್ನು ಅಲ್ಲಿಂದ ಚದುರುವಂತೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯಪಾಲ ವಜುಭಾಯಿ ವಾಲಾ ಅವರು ನಮನ ಸಲ್ಲಿಸಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ pic.twitter.com/Tb9FeF49JV