<p><strong>ಗುಡಿಬಂಡೆ: </strong>ಜಿಲ್ಲೆಯಲ್ಲಿ ಸುಮಾರು ಶೇ 16ರಿಂದ 18ರಷ್ಟು ಅರಣ್ಯದ ಕೊರತೆ ಇದೆ ಎಂದು ಸರ್ಕಾರಿ ಅಂಕಿ ಅಂಶಗಳೇ ಹೇಳುತ್ತವೆ. ಆದರೆ ವಾಸ್ತವ ಇನ್ನೂ ಭಿನ್ನವಾಗಿದ್ದು, ಬಹುಪಾಲು ಅರಣ್ಯ ನೀಲಗಿರಿಯಿಂದ ಆವೃತವಾಗಿದೆ ಎಂದು ‘ಉಸಿರಿಗಾಗಿ ಹಸಿರು’ ತಂಡದ ಕಾರ್ಯಕಾರಿ ಟ್ರಸ್ಟಿ ಎನ್.ಗಂಗಾಧರರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಕಮ್ಮಡಿಕೆ ಗ್ರಾಮದಲ್ಲಿ ಉಸಿರಿಗಾಗಿ ಹಸಿರು ತಂಡ, ಕಮ್ಮಡಿಕೆ ಯುವಜನರ ಸಂಘ ಹಾಗೂ ಬೆಂಗಳೂರಿನ ರೋಟರಿ ಎಬಿಲಿಟೀಸ್ ಸಂಸ್ಥೆ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನೀಲಗಿರಿಯಿಂದಾಗಿ ಜೀವವೈವಿಧ್ಯ ಸರ್ವನಾಶವಾಗಿದೆ. ಬೆಟ್ಟಗುಡ್ಡಗಳಲ್ಲಿ ಬೆಳೆದಿರುವ ಕುರುಚಲ ಗಿಡಗಳನ್ನು ಅರಣ್ಯವೆಂದು ಘೋಷಿಸಿರುವುದು ದುರಂತ ಎಂದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮದ ಶಾಲೆ ಆವರಣದಿಂದ ಬಯಲಾಂಜನೇಯ ಸ್ವಾಮಿ ದೇಗುಲದವರೆಗೆ ಸುಮಾರು 1.5 ಕಿ.ಮೀ ಉದ್ದದ ರಸ್ತೆ ಬದಿಯಲ್ಲಿ ಹೆಬ್ಬೇವು, ಸಿಲ್ವರ್, ಹೊಂಗೆ, ನೇರಳೆ ಬೆಟ್ಟದ ನೆಲ್ಲಿ, ಹುಣಸೆ ಸೇರಿದಂತೆ ವಿವಿಧ ಬಗೆಯ 500 ಸಸಿಗಳನ್ನು ನೆಟ್ಟರು.</p>.<p>ಗ್ರಾಮದ ಯುವಜನ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯರು ಗಿಡಗಳನ್ನು ನೆಟ್ಟು, ಪೋಷಿಸಿ ಸಂರಕ್ಷಿಸುವ ಪ್ರತಿಜ್ಙಾ ವಿಧಿ ಸ್ವೀಕರಿಸಿದರು. ರಿಜುವಿನೇಟ್ ಇಂಡಿಯಾ ಮೂವ್ಮೆಂಟ್ (ರಿಮ್) ಸಂಸ್ಥೆ ಸಹಯೋಗದಲ್ಲಿ ಉಸಿರಿಗಾಗಿ ಹಸಿರು ಸಂಸ್ಥೆಯು 15 ಬಡ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿತು.</p>.<p>ತಾ.ಪಂ. ಉಪಾಧ್ಯಕ್ಷ ಬೈರಾರೆಡ್ಡಿ, ಉಸಿರಿಗಾಗಿ ಹಸಿರು ತಂಡದ ಮಧುಕುಮಾರ್, ಅಜಯ್, ವಸಂತ್, ಕೀರ್ತಿಕುಮಾರ್, ಜಗದೀಶ್, ಸ್ವಾಮಿ, ಸುಧಾಕರ, ರಾಹುಲ್, ಚಂದನಾ, ಪ್ರೇರಣಾ, ಸಂಜನಾ ಗ್ರಾಮಸ್ಥರಾದ ವಿನೋದ್, ಶ್ರೀನಾಥ, ಮುರಳಿ, ಅಮರೇಶ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಜಿಲ್ಲೆಯಲ್ಲಿ ಸುಮಾರು ಶೇ 16ರಿಂದ 18ರಷ್ಟು ಅರಣ್ಯದ ಕೊರತೆ ಇದೆ ಎಂದು ಸರ್ಕಾರಿ ಅಂಕಿ ಅಂಶಗಳೇ ಹೇಳುತ್ತವೆ. ಆದರೆ ವಾಸ್ತವ ಇನ್ನೂ ಭಿನ್ನವಾಗಿದ್ದು, ಬಹುಪಾಲು ಅರಣ್ಯ ನೀಲಗಿರಿಯಿಂದ ಆವೃತವಾಗಿದೆ ಎಂದು ‘ಉಸಿರಿಗಾಗಿ ಹಸಿರು’ ತಂಡದ ಕಾರ್ಯಕಾರಿ ಟ್ರಸ್ಟಿ ಎನ್.ಗಂಗಾಧರರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಕಮ್ಮಡಿಕೆ ಗ್ರಾಮದಲ್ಲಿ ಉಸಿರಿಗಾಗಿ ಹಸಿರು ತಂಡ, ಕಮ್ಮಡಿಕೆ ಯುವಜನರ ಸಂಘ ಹಾಗೂ ಬೆಂಗಳೂರಿನ ರೋಟರಿ ಎಬಿಲಿಟೀಸ್ ಸಂಸ್ಥೆ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನೀಲಗಿರಿಯಿಂದಾಗಿ ಜೀವವೈವಿಧ್ಯ ಸರ್ವನಾಶವಾಗಿದೆ. ಬೆಟ್ಟಗುಡ್ಡಗಳಲ್ಲಿ ಬೆಳೆದಿರುವ ಕುರುಚಲ ಗಿಡಗಳನ್ನು ಅರಣ್ಯವೆಂದು ಘೋಷಿಸಿರುವುದು ದುರಂತ ಎಂದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮದ ಶಾಲೆ ಆವರಣದಿಂದ ಬಯಲಾಂಜನೇಯ ಸ್ವಾಮಿ ದೇಗುಲದವರೆಗೆ ಸುಮಾರು 1.5 ಕಿ.ಮೀ ಉದ್ದದ ರಸ್ತೆ ಬದಿಯಲ್ಲಿ ಹೆಬ್ಬೇವು, ಸಿಲ್ವರ್, ಹೊಂಗೆ, ನೇರಳೆ ಬೆಟ್ಟದ ನೆಲ್ಲಿ, ಹುಣಸೆ ಸೇರಿದಂತೆ ವಿವಿಧ ಬಗೆಯ 500 ಸಸಿಗಳನ್ನು ನೆಟ್ಟರು.</p>.<p>ಗ್ರಾಮದ ಯುವಜನ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯರು ಗಿಡಗಳನ್ನು ನೆಟ್ಟು, ಪೋಷಿಸಿ ಸಂರಕ್ಷಿಸುವ ಪ್ರತಿಜ್ಙಾ ವಿಧಿ ಸ್ವೀಕರಿಸಿದರು. ರಿಜುವಿನೇಟ್ ಇಂಡಿಯಾ ಮೂವ್ಮೆಂಟ್ (ರಿಮ್) ಸಂಸ್ಥೆ ಸಹಯೋಗದಲ್ಲಿ ಉಸಿರಿಗಾಗಿ ಹಸಿರು ಸಂಸ್ಥೆಯು 15 ಬಡ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿತು.</p>.<p>ತಾ.ಪಂ. ಉಪಾಧ್ಯಕ್ಷ ಬೈರಾರೆಡ್ಡಿ, ಉಸಿರಿಗಾಗಿ ಹಸಿರು ತಂಡದ ಮಧುಕುಮಾರ್, ಅಜಯ್, ವಸಂತ್, ಕೀರ್ತಿಕುಮಾರ್, ಜಗದೀಶ್, ಸ್ವಾಮಿ, ಸುಧಾಕರ, ರಾಹುಲ್, ಚಂದನಾ, ಪ್ರೇರಣಾ, ಸಂಜನಾ ಗ್ರಾಮಸ್ಥರಾದ ವಿನೋದ್, ಶ್ರೀನಾಥ, ಮುರಳಿ, ಅಮರೇಶ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>