ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ 10 ವರ್ಷಗಳಲ್ಲಿ ಜಿಲ್ಲೆ 8 ವರ್ಷ ಬರಗಾಲಕ್ಕೆ ತುತ್ತಾಗಿದೆ. ಹೀಗಾಗಿ ಶೀಘ್ರದಲ್ಲಿಯೇ ಎಲ್ಲ ಶಾಸಕರೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡುತ್ತೇವೆ. ಬರ ನಿಭಾಯಿಸಲು ಕ್ರಮಕೈಗೊಳ್ಳುತ್ತೇವೆ. ಭದ್ರಾ ನದಿ ನೀರನ್ನು ನಮ್ಮ ಭಾಗಕ್ಕೆ ಪಡೆಯುವ ಚಿಂತನೆ ನಡೆಸಿದ್ದೇವೆ. ಮಳೆ ಹಾನಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ₹10 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಅದರ ನಾಲ್ಕು ಪಟ್ಟು ಹಣ ಕೊಟ್ಟರೂ ಸಾಕಾಗದು’ ಎಂದು ತಿಳಿಸಿದರು.