‘ನಗರದ ಜನಸಂಖ್ಯೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಹೀಗಿರುವಾಗ ಜಕ್ಕಲಮಡುಗು ನೀರನ್ನು ದೊಡ್ಡಬಳ್ಳಾಪುರ ನಗರಕ್ಕೆ ಕೇಳುವುದು ನ್ಯಾಯವೆ? ಬಚ್ಚೇಗೌಡರು ಈ ಬಗ್ಗೆ ಯೋಚಿಸಬೇಕಾಗಿದೆ. ದೊಡ್ಡಬಳ್ಳಾಪುರ ನಗರ ಕೇವಲ ತಾಲ್ಲೂಕು ಕೇಂದ್ರವಾಗಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆ ಬರಗಾಲದಿಂದ ತತ್ತರಿಸಿ ಹೋಗಿದ್ದು, ಕುಡಿಯುವ ನೀರಿನ ಸಮಸ್ಯೆಯಿಂದ ಜನ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಸದರು ಶೇ 50:50ರ ಅನುಪಾತದಲ್ಲಿ ದೊಡ್ಡಬಳ್ಳಾಪುರಕ್ಕೆ ನೀರು ಹರಿಸುತ್ತೇವೆ ಎನ್ನುವುದು ಸಲ್ಲದು’ ಎಂದು ಹೇಳಿದ್ದಾರೆ.