<p>ಗೌರಿಬಿದನೂರು: ಮುದುಗಾನಕುಂಟೆ ಗಂಗಮ್ಮನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಎಲ್ಲ ರೀತಿಯ ಸೌಕರ್ಯ ಕಲ್ಪಿಸುವುದಾಗಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಭರವಸೆ ನೀಡಿದರು.</p>.<p>ಮುದುಗಾನಕುಂಟೆ ಪ್ರವೇಶ ದ್ವಾರದಿಂದ ಗಂಗಮ್ಮ ತಾಯಿ ಕಲ್ಯಾಣಿವರೆಗೂ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸುವ ಸಿಮೆಂಟ್ ರಸ್ತೆಯ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಗಂಗಮ್ಮ ದರ್ಶನಕ್ಕಾಗಿ ಪ್ರತಿ ಸೋಮವಾರ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮಹಿಳಾ ಯಾತ್ರಿಕರಿಗಾಗಿ ಸ್ನಾನದ ಗೃಹಗಳ ಸಂಕೀರ್ಣ ನಿರ್ಮಿಸಲು ಸುಮಾರು ₹60ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಸ್ನಾನಗೃಹಗಳ ಸಂಕೀರ್ಣದ ಕಾಮಗಾರಿ ಪ್ರಗತಿಯಲ್ಲಿದೆ. ಭಕ್ತರಿಗಾಗಿ ಕುಡಿಯುವ ನೀರಿನ ಘಟಕ ಅವಶ್ಯಕತೆ ಇದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಸಲ್ಲಿಸಿದ್ದಾರೆ. ಅದನ್ನು ಶೀಘ್ರವಾಗಿ ನೆರವೇರಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಅರವಿಂದ್, ಇಒ ಜಿ.ಕೆ ಹೊನ್ನಯ್ಯ, ಅಂಜನ್ ಕುಮಾರ್, ನರಸಿಂಹರೆಡ್ಡಿ, ಕಿರಣ್, ಲಕ್ಷ್ಮಿನಾರಾಯಣ್ ಪಟೇಲ್, ಸಾಗಾನಹಳ್ಳಿ ಶಿವಕುಮಾರ್, ಕೆ.ನಂಜುಂಡಪ್ಪ, ಅಶೋಕ್ ಕುಮಾರ್, ಚಂದ್ರು, ಹನುಮಂತರಾಯಪ್ಪ, ಜಬೀ, ನರಸಿಂಹಮೂರ್ತಿ, ತಿಮ್ಮರೆಡ್ಡಿ, ಆನಂದ್, ಮೂರ್ತಿ, ವಿಜಯ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-16-358345177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಮುದುಗಾನಕುಂಟೆ ಗಂಗಮ್ಮನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಎಲ್ಲ ರೀತಿಯ ಸೌಕರ್ಯ ಕಲ್ಪಿಸುವುದಾಗಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಭರವಸೆ ನೀಡಿದರು.</p>.<p>ಮುದುಗಾನಕುಂಟೆ ಪ್ರವೇಶ ದ್ವಾರದಿಂದ ಗಂಗಮ್ಮ ತಾಯಿ ಕಲ್ಯಾಣಿವರೆಗೂ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸುವ ಸಿಮೆಂಟ್ ರಸ್ತೆಯ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಗಂಗಮ್ಮ ದರ್ಶನಕ್ಕಾಗಿ ಪ್ರತಿ ಸೋಮವಾರ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮಹಿಳಾ ಯಾತ್ರಿಕರಿಗಾಗಿ ಸ್ನಾನದ ಗೃಹಗಳ ಸಂಕೀರ್ಣ ನಿರ್ಮಿಸಲು ಸುಮಾರು ₹60ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಸ್ನಾನಗೃಹಗಳ ಸಂಕೀರ್ಣದ ಕಾಮಗಾರಿ ಪ್ರಗತಿಯಲ್ಲಿದೆ. ಭಕ್ತರಿಗಾಗಿ ಕುಡಿಯುವ ನೀರಿನ ಘಟಕ ಅವಶ್ಯಕತೆ ಇದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಸಲ್ಲಿಸಿದ್ದಾರೆ. ಅದನ್ನು ಶೀಘ್ರವಾಗಿ ನೆರವೇರಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಅರವಿಂದ್, ಇಒ ಜಿ.ಕೆ ಹೊನ್ನಯ್ಯ, ಅಂಜನ್ ಕುಮಾರ್, ನರಸಿಂಹರೆಡ್ಡಿ, ಕಿರಣ್, ಲಕ್ಷ್ಮಿನಾರಾಯಣ್ ಪಟೇಲ್, ಸಾಗಾನಹಳ್ಳಿ ಶಿವಕುಮಾರ್, ಕೆ.ನಂಜುಂಡಪ್ಪ, ಅಶೋಕ್ ಕುಮಾರ್, ಚಂದ್ರು, ಹನುಮಂತರಾಯಪ್ಪ, ಜಬೀ, ನರಸಿಂಹಮೂರ್ತಿ, ತಿಮ್ಮರೆಡ್ಡಿ, ಆನಂದ್, ಮೂರ್ತಿ, ವಿಜಯ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-16-358345177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>