ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜೆಡಿಎಸ್‌ ಜಿಲ್ಲಾ ಘಟಕಕ್ಕೆ ಮುನೇಗೌಡ ಅಧ್ಯಕ್ಷ

ಎರಡು ವರ್ಷಗಳಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ನೇಮಕ
Last Updated 11 ಜುಲೈ 2020, 15:48 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಎರಡು ವರ್ಷಗಳಿಂದ ಖಾಲಿ ಇದ್ದ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಂ.ಮುನೇಗೌಡ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಬೆಂಗಳೂರಿನಲ್ಲಿ ಮುನೇಗೌಡ ಅವರಿಗೆ ನೇಮಕಾತಿ ಆದೇಶ ಪತ್ರ ನೀಡುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಿದರು.

ಈ ವೇಳೆ ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್, ಮುಖಂಡ ಮೇಲೂರು ರವಿಕುಮಾರ್ ಹಾಜರಿದ್ದರು.

ಈ ಹಿಂದೆ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಕೆ.ವಿ.ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. ಅಂದಿನಿಂದ ಸುಮಾರು ಎರಡು ವರ್ಷಗಳ ಕಾಲ ಅಧ್ಯಕ್ಷ ಹುದ್ದೆ ಖಾಲಿಯಾಗಿತ್ತು.

ಇದೀಗ ನಂದಿ ಕ್ಷೇತ್ರದ ಸದಸ್ಯ ಮುನೇಗೌಡ ಅವರಿಗೆ ಜಿಲ್ಲೆಯಲ್ಲಿ ಪಕ್ಷ ಮುನ್ನಡೆಸುವ ಹೊಣೆಗಾರಿಕೆ ವಹಿಸಿರುವುದು ಪಕ್ಷಾಂತರದಿಂದ ನಲುಗಿ, ನಿಸ್ತೇಜಗೊಂಡಿದ್ದ ಪಕ್ಷದೊಳಗೆ ಸಂಚಲನ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT