‘ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಇಲ್ಲದೇ ಇರುವುದರಿಂದ ಆಹಾರ ಹಂಚಲು ಆಗಿಲ್ಲ. ಮುಂದಿನ ದಿನಗಳಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥ, ನಿರ್ಗತಿಕರನ್ನು, ವೃದ್ಧರನ್ನು, ಭಿಕ್ಷುಕರನ್ನು ಗುರುತಿಸಿ, ಪ್ರತಿದಿನ ಅವರು ಇರುವ ಕಡೆಗೆ ಪುರಸಭೆ ಸಿಬ್ಬಂದಿ ಹೋಗಿ ಮೂರು ಬಾರಿ ಆಹಾರ, ನೀರು ಹಂಚುತ್ತಾರೆ’ ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ನಾಗರಾಜ್ ತಿಳಿಸಿದರು.