ಈ ವೇಳೆ ಮಾತನಾಡಿದ ನಗರಸಭೆ ಆಯುಕ್ತ ಲೋಹಿತ್, ‘ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗದಿರುವುದು ಸಮಾಧಾನದ ವಿಷಯ. ಮಾರಣಾಂತಿಕ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದ್ದರಿಂದ, ಹೋಟೆಲ್, ಮಿಲ್ಟ್ರಿ ಹೋಟೆಲ್, ಬೀದಿ ವ್ಯಾಪಾರಿಗಳು, ತರಕಾರಿ ಮಾರುವವರು ಸ್ವಚ್ಛತೆ ಹೆಚ್ಚಿನ ಆದ್ಯತೆ ವಹಿಸಿ ರೋಗ ರುಜಿನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯೊಂದಿಗೆ ಕೈಜೋಡಿಸಬೇಕು’ ಎಂದು ತಿಳಿಸಿದರು.