<p><strong>ಚಿಕ್ಕಬಳ್ಳಾಪುರ</strong>: ತೆರಿಗೆ ವಂಚನೆಯ ಮೂಲಕ ಸರ್ಕಾರಕ್ಕೆ ಸುಬ್ಬಾರೆಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ್ದರು. ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಈ ಬಗ್ಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೆ. ನ್ಯಾಯಮೂರ್ತಿ ಅವರು ನಮ್ಮ ಅರ್ಜಿ ಪುರಸ್ಕರಿಸಿ ಈ ತೀರ್ಪು ನೀಡಿದ್ದಾರೆ ಎಂದು ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಮುಖಂಡ ಸಿ.ಮುನಿರಾಜು ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು 2023ರ ವಿಧಾನಸಭೆ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿದ್ದ ಬಿಜೆಪಿಯ ಸಿ.ಮುನಿರಾಜು ಹೈಕೋರ್ಟ್ ಮೊರೆ ಹೋಗಿದ್ದರು.</p><p>ಚುನಾವಣೆಯ ನಂತರ ತೆರಿಗೆ ಪಾವತಿಸಿದರು. ತಕ್ಷಣವೇ ನಾನು ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಬ್ಬಾರೆಡ್ಡಿ ಈಗ ಶಾಸಕರಲ್ಲ. ನನಗೆ 63 ಸಾವಿರ ಮತಗಳನ್ನು ನೀಡಿದ ಬಾಗೇಪಲ್ಲಿ ಕ್ಷೇತ್ರದ ಜನರ ಗೆಲುವು ಇದು. ಸುಳ್ಳು ಪ್ರಮಾಣ ಪತ್ರವನ್ನು ಯಾರೂ ಸಲ್ಲಿಸಬಾರದು ಎನ್ನುವ ರೀತಿಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ. ಅವರು ಸುಪ್ರೀಂಕೋರ್ಟ್ಗೆ ಹೋದರೂ ನಾವು ಎದುರಿಸುತ್ತೇವೆ ಎಂದರು.</p>.ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತೆರಿಗೆ ವಂಚನೆಯ ಮೂಲಕ ಸರ್ಕಾರಕ್ಕೆ ಸುಬ್ಬಾರೆಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ್ದರು. ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಈ ಬಗ್ಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೆ. ನ್ಯಾಯಮೂರ್ತಿ ಅವರು ನಮ್ಮ ಅರ್ಜಿ ಪುರಸ್ಕರಿಸಿ ಈ ತೀರ್ಪು ನೀಡಿದ್ದಾರೆ ಎಂದು ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಮುಖಂಡ ಸಿ.ಮುನಿರಾಜು ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು 2023ರ ವಿಧಾನಸಭೆ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿದ್ದ ಬಿಜೆಪಿಯ ಸಿ.ಮುನಿರಾಜು ಹೈಕೋರ್ಟ್ ಮೊರೆ ಹೋಗಿದ್ದರು.</p><p>ಚುನಾವಣೆಯ ನಂತರ ತೆರಿಗೆ ಪಾವತಿಸಿದರು. ತಕ್ಷಣವೇ ನಾನು ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಬ್ಬಾರೆಡ್ಡಿ ಈಗ ಶಾಸಕರಲ್ಲ. ನನಗೆ 63 ಸಾವಿರ ಮತಗಳನ್ನು ನೀಡಿದ ಬಾಗೇಪಲ್ಲಿ ಕ್ಷೇತ್ರದ ಜನರ ಗೆಲುವು ಇದು. ಸುಳ್ಳು ಪ್ರಮಾಣ ಪತ್ರವನ್ನು ಯಾರೂ ಸಲ್ಲಿಸಬಾರದು ಎನ್ನುವ ರೀತಿಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ. ಅವರು ಸುಪ್ರೀಂಕೋರ್ಟ್ಗೆ ಹೋದರೂ ನಾವು ಎದುರಿಸುತ್ತೇವೆ ಎಂದರು.</p>.ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>