ಆರೋಪಿ ಸಲೀಂ ರೌಡಿಯಾಗಿದ್ದು, ಕೊಲೆ, ಸುಲಿಗೆ, ದರೋಡೆ, ಕೊಲೆಗೆ ಯತ್ನ ಸೇರಿದಂತೆ 38 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ತಲಘಟ್ಟಪುರ ಪೊಲೀಸ್ ಠಾಣೆಯ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆ. ಆರೋಪಿಗಳಾದ ನಾರಾಯಣಸ್ವಾಮಿ, ಚೇತನ್ ಕುಮಾರ್, ಬಾಲಚಂದ್ರ, ವಿನೋದ್ ಕುಮಾರ್ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಸಲೀಂನನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.