<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳು ಅವರ ಹಕ್ಕುಗಳಿಂದ ವಂಚಿತರಾಗಬಾರದು. ಕುಟುಂಬ ವಾತಾವರಣದಲ್ಲಿ ಬೆಳೆಯುವಂತೆ ಹಾಗೂ ತಂದೆ-ತಾಯಿಯ ಪ್ರೀತಿ ದೊರೆಯುವಂತೆ ವಿಶೇಷ ದತ್ತು ಸಂಸ್ಥೆಗಳು ವಾತಾವರಣ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.</p>.<p>ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಸಿ.ವಿ.ಕಮಲಮ್ಮ, ಸಿ.ವಿ.ವೆಂಕಟರಾಯಪ್ಪ ಸ್ಮಾರಕ ವಿಶೇಷ ದತ್ತು ಸಂಸ್ಥೆ ಆಶ್ರಯದಲ್ಲಿ ನಗರದ ಕಂದವಾರಪೇಟೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ದತ್ತು ಸಂಸ್ಥೆ ಮಕ್ಕಳಿಗೆ ನಾಮಕರಣ ಮಹೋತ್ಸವದಲ್ಲಿ ಮಾತನಾಡಿದರು.</p>.<p>ಬೇಡವಾದ ಮಕ್ಕಳನ್ನು ಎಲ್ಲೋ ಬಿಟ್ಟು ಹೋಗುವ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ಬಿಟ್ಟುಹೋಗಬಹುದು. ದತ್ತು ಮಗು ಪಡೆಯಲು ನೋಂದಣಿ ಮಾಡಿಸಿಕೊಂಡ ದಂಪತಿಗೆ ಮಕ್ಕಳನ್ನು ದತ್ತು ನೀಡಲಾಗುವುದು ಎಂದರು.</p>.<p>ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ದತ್ತು ಪ್ರಕ್ರಿಯೆಗೆ ಸಂಬಂಧಿಸಿದ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎನ್.ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್, ಕೆ.ವಿ.ಟ್ರಸ್ಟ್ ಸದಸ್ಯರಾದ ಮುನಿಯಪ್ಪ, ವಿಶೇಷ ದತ್ತು ಸಂಸ್ಥೆಯ ಸಂಯೋಜಕ ನಾರಾಯಣಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ತನಿಖಾ ಸಮಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳು ಅವರ ಹಕ್ಕುಗಳಿಂದ ವಂಚಿತರಾಗಬಾರದು. ಕುಟುಂಬ ವಾತಾವರಣದಲ್ಲಿ ಬೆಳೆಯುವಂತೆ ಹಾಗೂ ತಂದೆ-ತಾಯಿಯ ಪ್ರೀತಿ ದೊರೆಯುವಂತೆ ವಿಶೇಷ ದತ್ತು ಸಂಸ್ಥೆಗಳು ವಾತಾವರಣ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.</p>.<p>ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಸಿ.ವಿ.ಕಮಲಮ್ಮ, ಸಿ.ವಿ.ವೆಂಕಟರಾಯಪ್ಪ ಸ್ಮಾರಕ ವಿಶೇಷ ದತ್ತು ಸಂಸ್ಥೆ ಆಶ್ರಯದಲ್ಲಿ ನಗರದ ಕಂದವಾರಪೇಟೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ದತ್ತು ಸಂಸ್ಥೆ ಮಕ್ಕಳಿಗೆ ನಾಮಕರಣ ಮಹೋತ್ಸವದಲ್ಲಿ ಮಾತನಾಡಿದರು.</p>.<p>ಬೇಡವಾದ ಮಕ್ಕಳನ್ನು ಎಲ್ಲೋ ಬಿಟ್ಟು ಹೋಗುವ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ಬಿಟ್ಟುಹೋಗಬಹುದು. ದತ್ತು ಮಗು ಪಡೆಯಲು ನೋಂದಣಿ ಮಾಡಿಸಿಕೊಂಡ ದಂಪತಿಗೆ ಮಕ್ಕಳನ್ನು ದತ್ತು ನೀಡಲಾಗುವುದು ಎಂದರು.</p>.<p>ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ದತ್ತು ಪ್ರಕ್ರಿಯೆಗೆ ಸಂಬಂಧಿಸಿದ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎನ್.ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್, ಕೆ.ವಿ.ಟ್ರಸ್ಟ್ ಸದಸ್ಯರಾದ ಮುನಿಯಪ್ಪ, ವಿಶೇಷ ದತ್ತು ಸಂಸ್ಥೆಯ ಸಂಯೋಜಕ ನಾರಾಯಣಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ತನಿಖಾ ಸಮಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>