ನಗರದ ಬಸ್ ನಿಲ್ದಾಣ ಮತ್ತು ಅದರ ಸುತ್ತಮುತ್ತಲಿನ ಬಡಾವಣೆಗಳಲ್ಲಿನ ನೀರು ಇದೇ ಕಾಲುವೆ ಮೂಲಕ ಹರಿದು ಹೋಗಬೇಕಾಗಿದೆ. ಆದರೆ ಈ ಕಾಲುವೆಗಳನ್ನು ನಗರಸಭೆಯವರು ಸರಿಯಾಗಿ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ನಗರದ ವಿವಿಧ ಅಂಗಡಿ, ಮಳಿಗೆ, ಹೋಟಲ್, ಮಾಂಸದ ಅಂಗಡಿಯವರು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನೆಲ್ಲ ಇದೇ ಕಾಲುವೆಗೆ ತಂದು ಸುರಿದು ಮತ್ತಷ್ಟು ಪರಿಸ್ಥಿತಿ ಹದಗೆಡಿಸುತ್ತಿದ್ದಾರೆ.