<p><strong>ಚಿಕ್ಕಬಳ್ಳಾಪುರ:</strong> ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಬೆಟ್ಟ ಏರುವಾಗ ಆಯತಪ್ಪಿ ಬಿದ್ದ ನಿಶಾಂಕ್ (19) ಎಂಬುವವರನ್ನು ರಕ್ಷಿಸಲಾಗಿದೆ.ನವದೆಹಲಿ ಮೂಲದ ನಿಶಾಂಕ್ ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.</p>.<p>ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ನಿಶಾಂಕ್ ಬೈಕ್ನಲ್ಲಿ ಗಿರಿಧಾಮಕ್ಕೆ ಬಂದಿದ್ದಾರೆ. ಬೆಟ್ಟದ ಚೆಕ್ಪೋಸ್ಟ್ ಬಳಿ ಬೈಕ್ ನಿಲ್ಲಿಸಿದ್ದಾರೆ. ಅಲ್ಲಿಂದ ಬ್ರಹ್ಮಗಿರಿ ಬೆಟ್ಟದ ಮೂಲಕ ನಂದಿಗಿರಿಧಾಮ ಏರಲು ಮುಂದಾಗಿದ್ದಾರೆ.ಈ ವೇಳೆ ಆಯತಪ್ಪಿ ಬಿದ್ದಿದ್ದಾರೆ.</p>.<p>ಬೆಟ್ಟದಿಂದ ಸುಮಾರು 250 ಅಡಿ ಆಳ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿ ಸ್ವಲ್ಪ ಮಟ್ಟಿನ ಆಧಾರ ದೊರೆತಿದೆ. ಅವರು ಸಿಲುಕಿದ್ದ ಸ್ಥಳದಿಂದ ಮತ್ತೆ ಕೆಳಗೆ 300 ಅಡಿಗಳ ಕಂದಕವಿತ್ತು.</p>.<p>ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅರಣ್ಯ ಇಲಾಖೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದರು. ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ನಿಶಾಂಕ್ ಅವರನ್ನು ರಕ್ಷಿಸಲಾಯಿತು.ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಜೀವ ಉಳಿಸಿದ ಮೊಬೈಲ್:</strong> ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದ ಅವರು ಅಲ್ಲಿಂದಲೇ ದೆಹಲಿಯಲ್ಲಿರುವ ಪೋಷಕರಿಗೆ ಮೊಬೈಲ್ ಮೂಲಕ ಕರೆ ಮಾಡಿ ವಿಷಯ ತಿಳಿಸಿದರು. ಪೋಷಕರು ಕರ್ನಾಟಕ ಸರ್ಕಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ವಿಷಯ ತಿಳಿಸಿ, ಮಗನನ್ನು ರಕ್ಷಿಸುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಬೆಟ್ಟ ಏರುವಾಗ ಆಯತಪ್ಪಿ ಬಿದ್ದ ನಿಶಾಂಕ್ (19) ಎಂಬುವವರನ್ನು ರಕ್ಷಿಸಲಾಗಿದೆ.ನವದೆಹಲಿ ಮೂಲದ ನಿಶಾಂಕ್ ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.</p>.<p>ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ನಿಶಾಂಕ್ ಬೈಕ್ನಲ್ಲಿ ಗಿರಿಧಾಮಕ್ಕೆ ಬಂದಿದ್ದಾರೆ. ಬೆಟ್ಟದ ಚೆಕ್ಪೋಸ್ಟ್ ಬಳಿ ಬೈಕ್ ನಿಲ್ಲಿಸಿದ್ದಾರೆ. ಅಲ್ಲಿಂದ ಬ್ರಹ್ಮಗಿರಿ ಬೆಟ್ಟದ ಮೂಲಕ ನಂದಿಗಿರಿಧಾಮ ಏರಲು ಮುಂದಾಗಿದ್ದಾರೆ.ಈ ವೇಳೆ ಆಯತಪ್ಪಿ ಬಿದ್ದಿದ್ದಾರೆ.</p>.<p>ಬೆಟ್ಟದಿಂದ ಸುಮಾರು 250 ಅಡಿ ಆಳ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿ ಸ್ವಲ್ಪ ಮಟ್ಟಿನ ಆಧಾರ ದೊರೆತಿದೆ. ಅವರು ಸಿಲುಕಿದ್ದ ಸ್ಥಳದಿಂದ ಮತ್ತೆ ಕೆಳಗೆ 300 ಅಡಿಗಳ ಕಂದಕವಿತ್ತು.</p>.<p>ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅರಣ್ಯ ಇಲಾಖೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದರು. ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ನಿಶಾಂಕ್ ಅವರನ್ನು ರಕ್ಷಿಸಲಾಯಿತು.ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಜೀವ ಉಳಿಸಿದ ಮೊಬೈಲ್:</strong> ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದ ಅವರು ಅಲ್ಲಿಂದಲೇ ದೆಹಲಿಯಲ್ಲಿರುವ ಪೋಷಕರಿಗೆ ಮೊಬೈಲ್ ಮೂಲಕ ಕರೆ ಮಾಡಿ ವಿಷಯ ತಿಳಿಸಿದರು. ಪೋಷಕರು ಕರ್ನಾಟಕ ಸರ್ಕಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ವಿಷಯ ತಿಳಿಸಿ, ಮಗನನ್ನು ರಕ್ಷಿಸುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>