<p><strong>ಚಿಕ್ಕಬಳ್ಳಾಪುರ:</strong> ನಂದಿಬೆಟ್ಟಕ್ಕೆ ಭಾನುವಾರ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದರು. ಇದರಿಂದ ಕಿಲೋಮೀಟರ್ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ನಿಯಂತ್ರಿಸಲು ಸಾಧ್ಯವಾಗದಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ ಕಾರಣ ಟಿಕೆಟ್ ಕೌಂಟರ್ಗಳ ಮುಂದೆ ದಟ್ಟಣೆ ಹೆಚ್ಚಿತ್ತು. </p>.<p>ಬೆಳ್ಳಂಬೆಳಗ್ಗೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ನಂದಿ ಬೆಟ್ಟಕ್ಕೆ ಬಂದ ಕಾರಣ ಬೆಟ್ಟದಲ್ಲಿ ಕಿ.ಮೀ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿದ್ದವು. ಪ್ರವೇಶಕ್ಕೆ ಟಿಕೆಟ್ ವಿತರಿಸುವಲ್ಲಿ ಅವ್ಯವಸ್ಥೆ ಉಂಟಾಯಿತು. ಟಿಕೆಟ್ ಪಡೆಯಲು ಪ್ರವಾಸಿಗರು ಮುಗಿಬಿದ್ದರು.</p>.<p>ಸಾವಿರಾರು ಪ್ರವಾಸಿಗರಿಗೆ ಎರಡೇ ಕೌಂಟರ್ನಲ್ಲಿ ಮಾತ್ರ ಟಿಕೆಟ್ ವಿತರಿಸಲಾಯಿತು. ಮಳೆ ಲೆಕ್ಕಿಸದೆ ಟಿಕೆಟ್ಗಾಗಿ ಮಹಿಳೆಯರು, ಮಕ್ಕಳು, ಯುವ ಸಮುದಾಯ ಸಾಲುಗಟ್ಟಿತ್ತು. ಗಿರಿಧಾಮದಲ್ಲಿನ ಈ ಅವ್ಯವಸ್ಥೆ ಬಗ್ಗೆ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p>ಶನಿವಾರ ಮತ್ತು ಭಾನುವಾರ ನಂದಿ ಗಿರಿಧಾಮ ಮತ್ತು ಈಶಾ ಯೋಗ ಕೇಂದ್ರಕ್ಕೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ವಾರಾಂತ್ಯದ ದಿನಗಳಲ್ಲಿ ಗಿರಿಧಾಮದಲ್ಲಿ ಸಂಚಾರ ದಟ್ಟಣೆ ಸಾಮಾನ್ಯ ಎನ್ನುವಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಂದಿಬೆಟ್ಟಕ್ಕೆ ಭಾನುವಾರ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದರು. ಇದರಿಂದ ಕಿಲೋಮೀಟರ್ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ನಿಯಂತ್ರಿಸಲು ಸಾಧ್ಯವಾಗದಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ ಕಾರಣ ಟಿಕೆಟ್ ಕೌಂಟರ್ಗಳ ಮುಂದೆ ದಟ್ಟಣೆ ಹೆಚ್ಚಿತ್ತು. </p>.<p>ಬೆಳ್ಳಂಬೆಳಗ್ಗೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ನಂದಿ ಬೆಟ್ಟಕ್ಕೆ ಬಂದ ಕಾರಣ ಬೆಟ್ಟದಲ್ಲಿ ಕಿ.ಮೀ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿದ್ದವು. ಪ್ರವೇಶಕ್ಕೆ ಟಿಕೆಟ್ ವಿತರಿಸುವಲ್ಲಿ ಅವ್ಯವಸ್ಥೆ ಉಂಟಾಯಿತು. ಟಿಕೆಟ್ ಪಡೆಯಲು ಪ್ರವಾಸಿಗರು ಮುಗಿಬಿದ್ದರು.</p>.<p>ಸಾವಿರಾರು ಪ್ರವಾಸಿಗರಿಗೆ ಎರಡೇ ಕೌಂಟರ್ನಲ್ಲಿ ಮಾತ್ರ ಟಿಕೆಟ್ ವಿತರಿಸಲಾಯಿತು. ಮಳೆ ಲೆಕ್ಕಿಸದೆ ಟಿಕೆಟ್ಗಾಗಿ ಮಹಿಳೆಯರು, ಮಕ್ಕಳು, ಯುವ ಸಮುದಾಯ ಸಾಲುಗಟ್ಟಿತ್ತು. ಗಿರಿಧಾಮದಲ್ಲಿನ ಈ ಅವ್ಯವಸ್ಥೆ ಬಗ್ಗೆ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p>ಶನಿವಾರ ಮತ್ತು ಭಾನುವಾರ ನಂದಿ ಗಿರಿಧಾಮ ಮತ್ತು ಈಶಾ ಯೋಗ ಕೇಂದ್ರಕ್ಕೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ವಾರಾಂತ್ಯದ ದಿನಗಳಲ್ಲಿ ಗಿರಿಧಾಮದಲ್ಲಿ ಸಂಚಾರ ದಟ್ಟಣೆ ಸಾಮಾನ್ಯ ಎನ್ನುವಂತೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>