ಭಾನುವಾರ ಬೆಳಿಗ್ಗೆ ಸುಲ್ತಾನ್ ಪೇಟೆ ಮಾರ್ಗದಲ್ಲಿ ನಂದಿಗಿರಿಧಾಮಕ್ಕೆ ಮೆಟ್ಟಿಲುಗಳ ಮೂಲಕ ಮನೋಜ್ ಹಾಗೂ ಅವರ ಇಬ್ಬರು ಸ್ನೇಹಿತರು ಹತ್ತಿದ್ದಾರೆ. ಈ ಮಾರ್ಗದಲ್ಲಿರುವ ವೀರಭದ್ರೇಶ್ವರ ದೇಗುಲದ ಬಳಿ ಹೋದಾಗ ಮನೋಜ್ ಆಯತಪ್ಪಿ ಜಾರಿದ್ದಾರೆ. 80 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದಾರೆ. ತಕ್ಷಣ ಅವರ ಸ್ನೇಹಿತರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.